Advertisement

Tag: ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ತೊಂಡೆ ಚಪ್ಪರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಮ್ಮನ ಈ ಸ್ವಾಭಾವ ಗೊತ್ತಿದ್ದ ನನಗೆ ತೊಂಡೆ ಚಪ್ಪರ ಗಾಳಿಗೆ ಹೀಗೆ ಮೂರು ಕಾಲಲ್ಲಿ ನಿಂತದ್ದು ನೋಡಿ ದಿಗಿಲಾಯಿತು. ನಾನು ಕೃಷಿ ಕೆಲಸವನ್ನು ಬಿಟ್ಟು ಬಹಳ ವರ್ಷಗಳೇ ಆಗಿಹೋಗಿವೆ. ಹಾಗಾಗಿ ಅಷ್ಟು ದೊಡ್ಡ ಚಪ್ಪರವನ್ನು ಅಪ್ಪನ ಹಾಗೆ ಹಿಡಿದು ನಿಲ್ಲಿಸಿ ಸರಿ ಮಾಡುವ ವಿಶ್ವಾಸ ನನಗೆ ಇರಲಿಲ್ಲ. ಅಮ್ಮನ ಮುಖ ನೋಡಿದೆ. ಬದುಕಿನ ಆಧಾರವೇ ಕಳೆದುಕೊಂಡ ಹಾಗೆ ಕೂತಿದ್ದು ನೋಡಿ ಬೇಸರ ಆಯ್ತು. ಸಮಾಧಾನದ ಮಾತು ಹೇಳುವ ಅಂತ ಅನ್ನಿಸಿದರೂ ಮಾತು ಹೊರಡದೆ ಅಮ್ಮನ ಹತ್ತಿರ ಸುಮ್ಮನೆ ಕುಳಿತೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎರಡನೆಯ ಬರಹ

Read More

ಪುಸ್ತಕ ಹಾಗೂ ನೋಟ್ ಪುಸ್ತಕದ ಬಗ್ಗೆ ಒಂದಷ್ಟು ಮಾತು…: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಟಿಸಿಹೆಚ್ ಓದುವಾಗ ನಮ್ಮೂರಲ್ಲಿದ್ದ ಒಬ್ಬರು ನನಗೆ ಅವರ ಪುಸ್ತಕಗಳನ್ನು ಉಚಿತವಾಗಿ ಕೊಟ್ಟಿದ್ದರು. ಅಲ್ಲದೇ ನಮ್ಮೂರ ಗ್ರಂಥಪಾಲಕ ವಿಜಯಣ್ಣನೂ ಕೇಳಿದಾಗ ಪುಸ್ತಕಗಳನ್ನು ಕೊಡುತ್ತಿದ್ದರು. ನನ್ನ ಓದಿಗೆ ತುಂಬಾ ಸಹಕಾರ ಮಾಡಿದರು. ಪ್ರೌಢಶಾಲೆಯಲ್ಲಿದ್ದಾನ ನನಗೆ ನನ್ನ ಸೀನಿಯರ್ ಒಬ್ಬರು ಹಳೇ ಪುಸ್ತಕಗಳನ್ನು ಕೊಡುತ್ತೇನೆ ಎಂದು ಹೇಳಿ ಮೊದಲೇ ನನ್ನ ಬಳಿ ಅಡ್ವಾನ್ಸ್ ಆಗಿ ಹಣ ಪಡೆದು ಯಾಮಾರಿಸಿದ ಘಟನೆಯನ್ನು ನಾನು ಇನ್ನೂ ಮರೆತಿಲ್ಲ. ಅಲ್ಲದೇ ಪಿಯುಸಿಯನ್ನು ಬೆಂಗಳೂರಿನಲ್ಲಿ ಓದುವಾಗ ನಮ್ಮ ಹಾಸ್ಟೆಲ್ಲಿನ ಕೆಲ ಹುಡುಗರು ಪುಸ್ತಕಗಳನ್ನು ಕದ್ದು ಆಗ ಅವೆನ್ಯೂ ರಸ್ತೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ಪುಸ್ತಕದಂಗಡಿಗಳಿಗೆ ಮಾರುತ್ತಿದ್ದ ಘಟನೆಗಳೂ ಇವೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ