Advertisement

Tag: ಕೆಂಡಸಂಪಿಗೆ

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ