Advertisement

Tag: ಕೆಂಡಸಂಪಿಗೆ

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯಲಿಕ್ಕೆ ಬಂದಿದೆಯೆನೋ’ ಎಂದು ಉತ್ತರಿಸಿ ಮನೆಗೆಲಸದಲ್ಲಿ ತೊಡಗಿಸಿಕೊಂಡಳು. ನಮಗೆ ಮೀನನ್ನು ಸಂಭಾಳಿಸುವುದಕ್ಕಿಂತ ಮಕ್ಕಳನ್ನು ನಿಯಂತ್ರಿಸುವುದೇ ಕಷ್ಟಕರವಾಗಿತ್ತು. ಎಲ್ಲಿ ಬೌಲನ್ನು ಬಿಳಿಸುತ್ತಾರೋ…. ಎಂಬ ಭಯ..! ಮಗಳು ಕಿಡ್ಡಿಯಂತೂ “ಹತ್ರ ಹೋಗಬೇಡ ಬಾಂಬಿ ಮೀನು ಕಚ್ಚುತ್ತೆ” ಎಂದು ತನ್ನ ತೊದಲು ನುಡಿಯಲ್ಲಿ ಅಣ್ಣನಿಗೆ ಉಪದೇಶ ನೀಡಿ ತಾನೆ ಬೌಲ್‌ನ ಮುಂದೆ ಮೀನುಗಳು ಭಯ ಬೀಳುವಂತೆ ಹಲ್ಲು ಕಿರಿದುಕೊಂಡು ನಿಲ್ಲುತ್ತಿದ್ದಳು.
ಮಯೂರ ಬಿ ಮಸೂತಿ ಬರಹ ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ತಿರುವುಗಳ ಪಯಣದಲ್ಲೊಂದು ಒಲವಿನ ಬೆಳಕು: ರಾಮ್ ಪ್ರಕಾಶ್ ರೈ ಕೆ ಸರಣಿ

ಮಣಿರತ್ನಂ ಜಾನರ್ ಎಂದು ಕರೆಯಬಹುದಾದ ಶೈಲಿಯ ಕಥಾನಕವಿದು. ಅಲೈಪಾಯುದೆ, ರೋಜಾ, ಓಕೆ ಕಣ್ಮಣಿ ತೆರನಾದ ಚಿತ್ರ. ಇಲ್ಲಿ ಅಬ್ಬರಗಳಿಲ್ಲ. ಅನುರಾಗದ ಅತೀ ಸರಳ ವಿಜೃಂಭಣೆಯಿದೆ. ಬದುಕಿನ ನೈಜ ಮಾಧುರ್ಯವಿದೆ. ವಿಷಾದವಿದೆ, ನಿರ್ವಾತವಿದೆ. ನೋವು ನಲಿವಿನ ಸ್ಯಾಂಡ್ ವಿಚ್ ಕೂಡ. ನಿರ್ದೇಶಕ ಅಶೋಕ್ ತಮ್ಮ ಮೊದಲ ಪ್ರಯತ್ನದಲ್ಲಿ ಕೆಂಪು ಹೊಳೆಯ ತಟದ ಮೇಲೆ ನಡೆದ ಚಾರಣಿಗರ ನಾಪತ್ತೆಯ ಬಗ್ಗೆ ಮಾತನಾಡಿದ್ದರು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ದಿಯಾ’ ಸಿನಿಮಾದ ವಿಶ್ಲೇಷಣೆ

Read More

ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್‌ ಗುಂಜಗೋಡು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ