Advertisement

Tag: ಕೆಂಡಸಂಪಿಗೆ

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಮದುವೆಮನೇನೋ ಸಂತೆಕಟ್ಟೇನೋ: ಸುಮಾ ಸತೀಶ್ ಸರಣಿ

ಇಂತಾ ಜೋರಿನ ಅತ್ತೇ ಒಂದು ಪುಂಡ ಹಸಾನ ಪಳಗಿಸಿದ್ಲು. ಆ ಹಸು ಎಷ್ಟು ಜೋರು ಅಂದ್ರೇ ಯಾರಿಗೂ ಹಾಲು ಕರೆಯೋಕೇ ಬಿಡ್ತಿರಲಿಲ್ಲ. ನಮ್ಮತ್ತೇನೂ ಜೋರಲ್ವಾ. ಅದೂ ಜೋರು. ಇಬ್ರಲ್ಲೂ ಬಲು ಸ್ನೇಹ. ನಮ್ಮತ್ತೆ ಹಾಲು ಕರೆದರೆ ಕಮಕ್‌ ಕಿಮಕ್ ಅಂತಿರಲಿಲ್ಲ ತುಡುಗು ಮುಂಡೇದು. ಕೊನೇಗೆ ಮದುವೇ ದಿನ ಹಸೆಮಣೇ ಮೇಲಿದ್ದಾರೆ. ಈ ಹಸಾ ಹಾಲು ಕೊಡಲಿಲ್ಲ ಅಂತಾ ಹೇಳಿದ್ದಾರೆ. ನಮ್ಮತ್ತೆ ಹಸೇಮಣೇ ಮೇಲಿಂದ ಎದ್ದು ಹೋಗಿ ಹಾಲು ಕರೆದುಕೊಟ್ಟು ಬಂದಿದ್ದಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮದುವೆ ಮನೆಯ ಮತ್ತಷ್ಟು ವಿಷಯಗಳ ಕುರಿತ ಬರಹ ನಿಮ್ಮ ಓದಿಗೆ

Read More

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ

“ಆ ಧೂಪದ ಹೈಕಳನ್ನು ಯಾರೂ ಹತ್ತಿಸಿಕೊಂಡು ಹೊಬ್ಗ್ಯಾಡ್ರಿ” ಎಂದು ಹೇಳಿದರೆ; ಎರಡು ದಿನ ಹೈಕಳು ಇಸ್ಕೂಲಿಗೆ ಬಂದರೆ ಮೂರನೆ ದಿನಕ್ಕೆ ಮತ್ತೆ ಅದೇ ರಾಗ ಅದೇ ಹಾಡು. ರೋಸಿ ಹೋದ ಮೇಷ್ಟ್ರು ಒಮ್ಮೆ ಬೆಟ್ಟದ ಇನ್ಸಪೆಕ್ಟ್ರು ಊರಿಗೆ ಬಂದಾಗ “ಯಾರಿಗೂ ಹೆದರದ ಇವರು ಪೋಲಿಸ್ನೋರ‍್ಗೆ ಖರೇ ಹೆದ್ರೂದು” ಎಂದು ಸ್ವಾಲಿಗ್ರ ಕೇರಿಗೆ, ಹೊಲೇರಕೇರಿಗೆ ಕರ್ಕೊಂಡೋಗಿ “ಮಕ್ಕಳನ್ನ ತಾಳುಬೆಟ್ಟಕ್ಕೆ ಧೂಪ ಮಾರುವುದಕ್ಕೆ ಕಳುಹಿಸಿದರೆ ಜೇಲಿಗೆ ಹಾಕಿಸ್ತೀನಿ ಎಂದು ರೋಪ್ ಹೊಡೆಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ್ವಾಮಿ ಪೊನ್ನಾಚಿ ಕತೆ “ಧೂಪದ ಮಕ್ಕಳು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ