Advertisement

Tag: ಕೆಂಡಸಂಪಿಗೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ಮರೆವೆಂಬ ಮಾರ್ಜಾಲ, ಪರಿಸ್ಥಿತಿಯೆಂಬ ಮೂಷಿಕ…: ರಾಮ್ ಪ್ರಕಾಶ್ ರೈ ಕೆ ಸರಣಿ

ಲೋಕದ ಕಣ್ಣಿಗೆ ಚಚ್ಚೂ ನಾಪತ್ತೆಯಾದ ಪಟ್ಟಿಯಲ್ಲೇ ಇರಬೇಕಿದೆ. ಏಕೆಂದರೆ ಉಳಿದ ಜೀವಗಳ ಉಸಿರು ಬಂಧನದ ಬೇಗೆಗೆ ಬಿದ್ದು ಸುಡಬಾರದೆಂದರೆ ಆ ಘಟನೆಯನ್ನು ಮರೆಯಲೇ ಬೇಕಿದೆ. ಹೀಗೆ ದಿನ ಕಳೆದಾಗ ಮತ್ತೆ ಅಪ್ಪು ಪಿಳ್ಳೆ ಎಲ್ಲವನ್ನೂ ಮರೆತು ಹೋಗುತ್ತಾರೆ. ಮರಳಿ ತನಿಖೆ, ಮತ್ತದೇ ಕಹಿಯ ಅಂತ್ಯ ಎಲ್ಲವೂ ಮೋಟಾರಿನ ಚಕ್ರದಂತೆ ಮತ್ತದೇ ಆರಂಭ ಅದೇ ಅಂತ್ಯ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಕಿಷ್ಕಿಂದಾ ಕಾಂಡಮ್’ ಸಿನಿಮಾದ ವಿಶ್ಲೇಷಣೆ

Read More

ನಮ್ಮೂರ ಮಳೆಗಾಲದ ರಸದೌತಣ: ಭವ್ಯ ಟಿ.ಎಸ್.‌ ಬರಹ

ವಿದ್ಯುತ್ ಇಲ್ಲದ ರಾತ್ರಿಗಳು, ನೆಟ್ವರ್ಕ್ ಇಲ್ಲದೆ ಲೋಕದ ಸಂಪರ್ಕ ಕಡಿದುಕೊಂಡ ಹಗಲುಗಳು. ಇದ್ದಕ್ಕಿದ್ದಂತೆ ಬೀಸುವ ಬಿರುಗಾಳಿ, ಉರುಳಿ ಬೀಳುವ ಮರಗಳು. ಕುಸಿದು ಬೀಳುವ ಗುಡ್ಡ. ಹೀಗೆ ಮಳೆ ಎಂದರೆ ಸಂತಸ, ಸೌಂದರ್ಯಗಳ ಜೊತೆಗೆ ಭಯಾನಕತೆಗಳ ಸಂಮಿಶ್ರಣ. ಕೆಲವೊಮ್ಮೆ ಈ ಮಳೆ ಜಿಗುಪ್ಸೆ ಬೇಸರವೆನಿಸಿದ್ದೂ ಇದೆ. ಆದರೆ‌‌‌ ಮತ್ತೆ ಮತ್ತೆ ಈ ಮನ ಪ್ರತಿ ವರ್ಷದ ವರ್ಷಧಾರೆಗೆ ಹಪಹಪಿಸುತ್ತದೆ.
ಮಲೆನಾಡಿನ ಮಳೆಯ ದಿನಗಳ ಕುರಿತು ಭವ್ಯ ಟಿ.ಎಸ್‌. ಬರಹ ನಿಮ್ಮ ಓದಿಗೆ

Read More

ಕಲ್ಲುಬಂಡೆ ಮೇಲೆ ಕುಳಿತಿದ್ದ ಸೆಲ್ವಂ, ಸತ್ತುಹೋದನು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿಗೂ ಅವರು ಹೇಳುವುದು ಸರಿ ಎನಿಸಿತು. ತಾಯಿ ಮತ್ತು ತಂಗಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಒಂದೇ ದಿನದಲ್ಲಿ ಮಣಿಯ ಹೆಗಲಿಗೆ ಜಾರಿಬಿದ್ದಿತ್ತು. ಸುಮತಿಯ ಮದುವೆಯನ್ನೂ ಮಾಡಬೇಕಾಗಿತ್ತು. ಕಾರ್ಮಿಕ ಮುಖಂಡರು, ಮಣಿ ಮತ್ತು ಕನಕಳಿಗೆ ಸಾಂತ್ವನ ಹೇಳಿ ಮಣಿಗೆ ಕೆಲಸಕ್ಕೆ ಅರ್ಜಿ ಹಾಕಲು ಎಲ್ಲ ಕಾಗದ ಪತ್ರಗಳನ್ನು ಬೇಗನೆ ತಯಾರುಮಾಡಿ ಕೊಡುವಂತೆ ಹೇಳಿ ಹೊರಟುಹೋದರು. ಆರ್ಮುಗಮ್, ಮಣಿಗೆ ಆದಷ್ಟು ಬೇಗನೆ ಕೆಲಸ ಮಾಡಿಕೊಡುವಂತೆ ಅಯ್ಯಪ್ಪನಿಗೆ ಹೋಗುವ ಮುಂಚೆ ಕೇಳಿಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಇದು ನಿಮ್ದೇ ಸೈಟು ತಾನೇ!: ಎಚ್. ಗೋಪಾಲಕೃಷ್ಣ ಸರಣಿ

ನಾವು ಮನೆ ಮುಗಿಸಿ ವಾಸಕ್ಕೆ ಅಂತ ಬಂದಮೇಲೂ ಸಹ ಈ ಮನೆ ಕೇಸು ತುಂಬಾ ದಿವಸ ಎಳೆಯಿತು. ಸೈಟಿನ ಮೂಲ ಓನರ್ ಪರ್ಯಾಯ ಸೈಟಿಗೆ ಒಪ್ಪಿಗೆ ಕೊಡದೇ ಇದ್ದದ್ದು ಮತ್ತು ಅದೇ ಸೈಟು ತಮಗೆ ಬೇಕು ಅಂತ ಇರಾದೆ ವ್ಯಕ್ತ ಪಡಿಸಿದ್ದು ಕೇಸು ಎಳೆಯಲು ಅವಕಾಶ ಆಯಿತು. ಸೊಸೈಟಿ ಮಧ್ಯೆ ಪ್ರವೇಶ ಮಾಡಿ ಅಲ್ಟರ್ನೇಟ್ ಸೈಟು ಕೊಡ್ತೀವಿ ಅಂದರೂ ಕೊಸರಾಟ ಮುಂದುವರೆದು ಸುಮಾರು ಇಪ್ಪತ್ತು ವರ್ಷ ಕೇಸು ನಡೆದು ಕೊನೆಗೆ ಒಂದು ಕಾಂಪ್ರಮೈಸ್ ಡೀಲ್ ಆಯ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ