ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್ ಬರಹ
ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್ ಬರಹ ನಿಮ್ಮ ಓದಿಗೆ

