Advertisement

Tag: ಕೆಂಡಸಂಪಿಗೆ

ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ

ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಮ್ಮ ಜೀವನವೆಂಬ ವಾಹನದ ಚಾಲಕಪೀಠದಲ್ಲಿ ಯಾರಿದ್ದಾರೆ? ನಾವೋ ಅಥವಾ ಬೇರೆ ಯಾರಾದರೂ ಅಧಿಕಾರಸ್ಥರೋ? ಗಂಡಾಳಿಕೆಯ ಸಮಾಜಗಳಲ್ಲಿ ಹೆಣ್ಣು ತನ್ನ ಜೀವನದ ಚಾಲಕ ಪೀಠದಲ್ಲಿ ಕುಳಿತಿದ್ದು ತೀರಾ ಅಪರೂಪ. ಅವಳು ಏನು ತಿನ್ನಬೇಕು, ಕುಡಿಯಬೇಕು, ಯಾವ ಬಟ್ಟೆ ತೊಡಬೇಕು ಮುಂತಾದ ಸಾಧಾರಣ, ದೈನಿಕ ಸಂಗತಿಗಳಿಂದ ಹಿಡಿದು ಓದು, ಕೆಲಸ, ಮದುವೆ, ಆಸ್ತಿಗಳಿಕೆಗಳಂತಹ ಮುಖ್ಯ ವಿಷಯಗಳ ತನಕ ಮನೆಯ ಗಂಡಸರೋ ಅಥವಾ ಅವರ ಪ್ರತಿನಿಧಿಗಳಾದವರೋ ನಿರ್ಧರಿಸುವ ಕಾಲ ಅನೇಕ ಶತಮಾನಗಳ ತನಕ ಇತ್ತಲ್ಲ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ

ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ