Advertisement

Tag: ಕೆಂಡಸಂಪಿಗೆ

ಆಧಿಕ್ಯದ ಸಮಸ್ಯೆ…: ಡಾ. ಎಲ್.ಜಿ.ಮೀರಾ ಅಂಕಣ

ಪುರಂದರ ದಾಸರ ಸಾಲುಗಳು ನೆನಪಾಗುತ್ತವೆ – “ಇಷ್ಟು ದೊರಕಿದರೆ ಅಷ್ಟು ಬೇಕೆಂಬಾಸೆ, ಅಷ್ಟು ದೊರಕಿದರೆ ಮತ್ತಿಷ್ಟರಾಸೆ, ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ, ನಷ್ಟ ಜೀವನದಾಸೆ ಪುರಂದರ ವಿಠಲ”. ಮನುಷ್ಯನಿಗೆ ಸಾಕು ಎನ್ನುವುದು ಎಷ್ಟು ಕಷ್ಟ ಎಂಬ ವಿಷಯವು ನಮಗೆ ಇದರಿಂದ ಗೊತ್ತಾಗುತ್ತದೆ ಅಲ್ಲವೆ? ಎಷ್ಟಿದ್ದರೂ ನಮಗೆ ಇನ್ನೂ ಬೇಕು ಬೇಕು ಬೇಕು ಬೇಕು. ಒಬ್ಬೊಬ್ಬರು ಹೊಂದಿರುವ ಸಾವಿರ ಸೀರೆಗಳು, ಮುನ್ನೂರು ಚಪ್ಪಲಿಗಳು, ಚಿನ್ನದ ಶೌಚಾಲಯ ಘಟಕಗಳು, ನಲವತ್ತೆಂಟು ಕೈಗಡಿಯಾರಗಳು ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೆಂಟನೆಯ ಬರಹ

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಶೂನ್ಯ ಟಿಕೆಟ್’ನ ಒಂದು ಪ್ರಸಂಗ: ವಸಂತಕುಮಾರ್‌ ಕಲ್ಯಾಣಿ ಬರಹ

ಕಂಡಕ್ಟರ್ ಒಂದು ನಿರ್ಧಾರಕ್ಕೆ ಬಂದ. ಪೊಲೀಸರು ಬರಲಿ ಅವರೇ ನಿರ್ಧರಿಸಲಿ ಎಂದು ಬಸ್ ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ. ಆದರೂ ಬಸ್ ನಿಲ್ಲಲಿಲ್ಲ. ಪೋಲೀಸರ ಪ್ರವೇಶ ಮಾತಿನಲ್ಲಿ ಆದದ್ದಕ್ಕೆ, ಈ ಮೂವರು “ಕರೆಸಯ್ಯ ನಾವು ನೋಡದೆ ಇರೋ ಪೋಲಿಸ್ರಾ… ಹೆದರಿಸ್ತೀಯಾ? ಕರೆಸೆ ಬಿಡು” ಎಂದು ದುಂಬಾಲು ಬಿದ್ದರು. (ಹಾಗೆ ನಟಿಸಿದರು) ಒಂದು ಸ್ಟಾಪ್ ಮುಂದೆ ಬಂದ ಬಸ್ ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಐದು ನಿಮಿಷದಿಂದ ಯಾರಿಗೋ ಫೋನ್ ಮಾಡುತ್ತಾನೆ ಇದ್ದ ಕಂಡಕ್ಟರ್ “ಪೊಲೀಸರು ಬರ್ಲಿ; ಗೊತ್ತಾಗುತ್ತೆ” ಎನ್ನುತ್ತಾ. ಬಸ್ ಅನಿವಾರ್ಯವಾಗಿ ನಿಂತಿತು.
ವಸಂತಕುಮಾರ್ ಕಲ್ಯಾಣಿ ಬರೆದ ಶೂನ್ಯ ಟಿಕೇಟ್‌ ಒಂದರ ಪ್ರಸಂಗ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ದರ್ಶನ್‌ ಜಯಣ್ಣ ಹೊಸ ಸರಣಿ “ಸೌದಿ ಡೇಟ್ಸ್” ಇಂದಿನಿಂದ….

ನಾನಿಲ್ಲಿ ಇಲ್ಲಿಯತನಕ ಆರು ವರ್ಷ ನಾಲ್ಕು ತಿಂಗಳುಗಳನ್ನ ಕಳೆದಿದ್ದೇನೆ. ನನ್ನ ಕುಟುಂಬದ ಜೊತೆ, ಗೆಳೆಯರ ಜೊತೆ ಈ ದೇಶ ಸುತ್ತಾಡಿದ್ದೇನೆ. ಇಲ್ಲಿನ ಬೃಹತ್ ಕಾರ್ಖಾನೆಗಳನ್ನು ಸ್ವತಃ ನೋಡಿದ್ದೇನೆ. ಇಲ್ಲಿನ ರಣ ಬಿಸಿಲಿನ ಜೊತೆಗೆ ತಂಪಾದ ಹವೆಯನ್ನೂ ಅನುಭವಿಸಿದ್ದೇನೆ. ಮರಳ ಮಳೆ, ನಿಜದ ಮಳೆ ಎರಡಕ್ಕೂ ಸಾಕ್ಷಿಯಾಗಿದ್ದೇನೆ. ಅರಬ್ಬರ ಜೊತೆ ಕೆಲಸ ಮಾಡಿ, ಓಡಾಡಿ ಚರ್ಚಿಸಿದ್ದೇನೆ. ಅವರ ಕನಸು, ವಿಚಾರ, ಜೀವನ ಕ್ರಮ, ಸ್ನೇಹವನ್ನು ಅನುಭವಿಸಿದ್ದೇನೆ.
ಸೌದಿ ಅರೇಬಿಯಾದ ವಾಸಿಯಾದ ದರ್ಶನ್‌ ಜಯಣ್ಣ ಅಲ್ಲಿನ ವಾಸದ ಹಾಗೂ ಆ ದೇಶದ ಕುರಿತು ತಮ್ಮ ಅನುಭವಗಳನ್ನು “ಸೌದಿ ಡೇಟ್ಸ್”‌ ಹೆಸರಿನಲ್ಲಿ ಶನಿವಾರಗಳಂದು, ಹದಿನೈದು ದಿನಗಳಿಗೊಮ್ಮೆ ಬರೆಯಲಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ