Advertisement

Tag: ಕೆಂಡಸಂಪಿಗೆ

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಓದುತ್ತಿದ್ದಾಗಲೇ ನಾನು ಮೇಷ್ಟ್ರು ಎಂಬ ಸುಳ್ಳಿನ‌ ಕತೆ ಕಟ್ಟಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಅವಳು “ನಿಮ್ಮ ತರಹದವರನ್ನೇ ನಾನು ಕಾಲೇಜಿನಲ್ಲಿ ನೋಡಿದೆ” ಎಂದಾಗ ನಾನು ನಗುತ್ತಾ “ಹೋ.. ಹೋ… ಅವನಾ? ನನ್ನ ತಮ್ಮ, ಅವನನ್ನು ನೋಡಿ ನೀನು ನಾನೇ ಎಂದು ಭಾವಿಸಿದೆಯಾ” ಎಂದು ಹೊಸ ಕಥೆ ಕಟ್ಟಿದೆ. ಆಗ ಅವಳು “ಅದ್ಹೇಗೆ? ನೀವಿಬ್ಬರೂ ಒಂದೇ ಕ್ಲಾಸಲ್ಲಿ ಇರಬೇಕಿತ್ತಲ್ವಾ?” ಎಂದಾಗ “ಹೋ ಹೋ ಅದಾ ಅವನು ಫೇಲ್ ಆಗೀ ಆಗೀ ಹಿಂದಕ್ಕೆ ಉಳಿದುಕೊಂಡ ನಾನು ಪಾಸ್ ಆಗೀ ಆಗೀ ಮುಂದಕ್ಕೆ ಹೋದೆ” ಎಂದೆ. ಅವಳು ನಂಬಿದಳು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ