Advertisement

Tag: ಕೆಂಡಸಂಪಿಗೆ

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಗೋ ಮಾಂಡೋ…. ಗೋ…!!: ಕಾರ್ತಿಕ್‌ ಕೃಷ್ಣ ಸರಣಿ

ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್‌ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್‌ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ