Advertisement

Tag: ಕೆಂಡಸಂಪಿಗೆ

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಂಕುಳಲ್ಲಿ ಕತೆ ಪುಸ್ತಕ, ಎದೆಯಲ್ಲಿ ಕಥಾಸಾಗರ: ಸುಮಾ ಸತೀಶ್‌ ಸರಣಿ

ಅಂಗೆ ನೋಡಿದ್ರೆ ನಮ್ಮ‌ ನಾಗೂ ಅತ್ತೆಗೆ ಅಕ್ಷರಾನೇ ತಲೆಗೆ ಹತ್ತಲಿಲ್ಲ.‌ ಕೊನೆಗೆ ಅವರಿಗೆ ಸಂಗೀತ ಕಲಿಸಲು ಹಾರ್ಮೋನಿಯಂ ಮೇಷ್ಟ್ರನ್ನ ಕರೆಸಿದ್ರು. ಆ ಮೇಷ್ಟ್ರು ಮೊದಲು ಕಾಗುಣಿತ ತಿದ್ದಿಸಿ ಆಮೇಲೆ ಸಂಗೀತ ಹೇಳಿಕೊಟ್ಟಿದ್ದರು. ನಮ್ಮತ್ತೆಯ ಅಲ್ಪಪ್ರಾಣ ಮಹಾಪ್ರಾಣಗಳಿಗೆ ಜೀವ ತುಂಬಿದರು ಮೇಷ್ಟ್ರು. ಮೊದಲೇ ಕಲ್ಪನಾ ಚತುರೆ ಅತ್ತೆ. ಅಕ್ಷರಾನೂ ಬಂದ ಮೇಲೆ ಕತೆ ಬರೇಯೋಕೆ ಶುರು ಮಾಡಿದ್ರು. ಇಷ್ಟೇ ಅಲ್ಲ, ಅಕ್ಕಂದಿರ ಮಕ್ಕಳನ್ನು ಬಳಿ ಕೂರಿಸಿಕೊಂಡು ಸ್ವಾರಸ್ಯಕರವಾಗಿ ಕತೆ ಕಟ್ಟಿ ಹೇಳುವ ಕಲೆ ಇವರಲ್ಲಿ ಸೊಗಸಾಗಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ಮರೆವೆಂಬ ಮಾರ್ಜಾಲ, ಪರಿಸ್ಥಿತಿಯೆಂಬ ಮೂಷಿಕ…: ರಾಮ್ ಪ್ರಕಾಶ್ ರೈ ಕೆ ಸರಣಿ

ಲೋಕದ ಕಣ್ಣಿಗೆ ಚಚ್ಚೂ ನಾಪತ್ತೆಯಾದ ಪಟ್ಟಿಯಲ್ಲೇ ಇರಬೇಕಿದೆ. ಏಕೆಂದರೆ ಉಳಿದ ಜೀವಗಳ ಉಸಿರು ಬಂಧನದ ಬೇಗೆಗೆ ಬಿದ್ದು ಸುಡಬಾರದೆಂದರೆ ಆ ಘಟನೆಯನ್ನು ಮರೆಯಲೇ ಬೇಕಿದೆ. ಹೀಗೆ ದಿನ ಕಳೆದಾಗ ಮತ್ತೆ ಅಪ್ಪು ಪಿಳ್ಳೆ ಎಲ್ಲವನ್ನೂ ಮರೆತು ಹೋಗುತ್ತಾರೆ. ಮರಳಿ ತನಿಖೆ, ಮತ್ತದೇ ಕಹಿಯ ಅಂತ್ಯ ಎಲ್ಲವೂ ಮೋಟಾರಿನ ಚಕ್ರದಂತೆ ಮತ್ತದೇ ಆರಂಭ ಅದೇ ಅಂತ್ಯ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಕಿಷ್ಕಿಂದಾ ಕಾಂಡಮ್’ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ