Advertisement

Tag: ಕೆಂಡಸಂಪಿಗೆ

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ

ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ

Read More

ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್‌ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಅಂಡಮಾನ್-ನಿಕೋಬಾರ್ ದ್ವೀಪಗಳ ಅನುಭವಗಳು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಪೋರ್ಟ್ ಬ್ಲೇರ್ ನಿಲ್ದಾಣದಲ್ಲಿ ಇಳಿದು ಹೊರಕ್ಕೆ ಬರುತ್ತಿದ್ದಂತೆ ಹಾರಾಡುತ್ತ ಬಂದ ಮೋಡಗಳು ಸಣ್ಣದಾಗಿ ಮಳೆ ಹನಿಯತೊಡಗಿದವು. ಇಬ್ಬರೂ ಓಡೋಡಿ ಹೋಗಿ ನಿಲ್ದಾಣದ ಒಳಕ್ಕೆ ಸೇರಿಕೊಂಡೆವು. ವಿಮಾನ ಮತ್ತು ವಿಮಾನ ನಿಲ್ದಾಣದ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಜನರು ಕೆಲವೇ ಕ್ಷಣಗಳಲ್ಲಿ ತೊಯ್ದು ತೊಪ್ಪೆಯಾಗಿದ್ದರು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ನೀರ ನೆಲದ ಮೇಲೆ ನೂರಾರು ಮನೆ – ಧೊದಿಯಾ: ಹೇಮಾ ನಾಯಕ ಬರಹ

ಹೀಗೆ ನೆಲದಿಂದ ಎತ್ತರಿಸಿ ಕಟ್ಟಿದ ಚಿಕ್ಕ ಚಿಕ್ಕ ಗೂಡುಗಳು ಅಲ್ಲಲ್ಲಿ ಚದುರಿಕೊಂಡಂತೆ ಇದ್ದು, ನೀರೇ ಬುಡಕ್ಕೆ ಕೈ ಹಾಕಿ ಎಬ್ಬಿಸಿ ಕೂರಿಸಿದಂತೆ ಕಾಣಿಸುತ್ತವೆ. ಹೆಚ್ಚುಕಮ್ಮಿ ಎಲ್ಲ ತೊಳೆದುಕೊಂಡು ಹೋಗುವಂತೆ ಕಾಣುತ್ತಿದ್ದ ಊರಿನಲ್ಲಿ, ಅಟ್ಟದ ಕೋಣೆಗಳಿಗೆ ಹೊಂದಿಕೊಂಡಂತೆ ಹೂವಿನ ಕುಂಡಗಳನ್ನು ಸುಂದರವಾಗಿ ಜೋಡಿಸಿದ್ದು ನೋಡಿ ಅಚ್ಚರಿಯ ಜೊತೆ ಖುಷಿಯೂ ಆಯಿತು. ಧೊದಿಯಾದಲ್ಲಿ ಒಂದೇ ಒಂದು ಕಿರಾಣಿ ಅಂಗಡಿಯಿದೆ. ಅದರ ಮಾಲೀಕ ನನ್ನನ್ನು ಕರೆದು ತನ್ನ ಮೊಟ್ಟಮೊದಲ ಅಂಗಡಿ ಅದೋ ಅಲ್ಲಿಯೇ ಇತ್ತೆಂದು ದಿಬ್ರು ನದಿಯ ನಡುವೆ ಕಾಣದ ಯಾವುದೋ ಬಿಂದುವಿನತ್ತ ಬೆರಳು ತೋರಿಸಿದ.
ಅಸ್ಸಾಮ್ ರಾಜ್ಯದ ಧೊದಿಯಾ ಹಳ್ಳಿಗೆ ನೀಡಿದ ಭೇಟಿಯ ಕುರಿತು ಹೇಮಾ ನಾಯಕ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ