Advertisement

Tag: ಕೆಂಡಸಂಪಿಗೆ

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್‌ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್‌ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್‌ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಸುಮಾ ಸತೀಶ್‌ ಹೊಸ ಸರಣಿ “ರಂಗಿನ ರಾಟೆ” ಆರಂಭ…

ಹಳ್ಳಿಯೂರ ಬದುಕು ಹಗಲು-ರಾತ್ರಿಯ ಪರಿವಿಲ್ಲದೆ ಕತೆ ನೇಯುವ ಕಥಾಕಣಜ. ಸುಮಾ ಸತೀಶ್ ಇಂಥ ಕಣಜದ ಹತ್ತು ಹಲವು ಕತೆಗಳನ್ನು‌ “ರಂಗಿನ ರಾಟೆ” ಸರಣಿಯಲ್ಲಿ ಪ್ರತೀ ಬುಧವಾರ ಕೆಂಡಸಂಪಿಗೆಯ ಓದುಗರ ಮುಂದೆ ಇಡಲಿದ್ದಾರೆ. ಈ ಹೊಸ ಸರಣಿಯ ಮೊದಲ ಕಂತು ಇಲ್ಲಿದೆ

Read More

ಹುಣಸೇ ಚಿಗುರು ಮತ್ತು ಸ್ತ್ರೀತ್ವ…: ದಯಾ ಗಂಗನಘಟ್ಟ ಮುನ್ನುಡಿ

ಪಿತೃ ಹಿತಾಸಕ್ತ ನಿಲುವುಗಳ ಅರಿವಿರುವ ಕತೆಗಾರ್ತಿ ಪ್ರಜ್ಞಾಪೂರ್ವಕವಾಗಿಯೇ ಅದನ್ನ ತಮ್ಮ ಕತೆಯಲ್ಲಿ ಕಟ್ಟುತ್ತಾರೆ. ಹಾಗಾಗಿಯೇ ಹೆಣ್ಣಿನ ಸಹಜ ಸತ್ವದ ಹುಡುಕಾಟವನ್ನ ಇವರ ಸ್ತ್ರೀ ಪಾತ್ರಗಳಲ್ಲಿ ಬೆದಕಬಹುದು. ಸ್ತ್ರೀತ್ವದ ನಿಲುವಿನ ಬಗ್ಗೆ ಇವರಿಗೊಂದು ಸ್ಪಷ್ಟ ನಿಲುವಿದೆ. ಅದರೊಳಗೊಂದು ಅವರದ್ದೇ ಆದ ಏಸ್ತೆಟಿಕ್ ಇದೆ. ಹೆಣ್ಣಿನ ಅಗತ್ಯ ಮತ್ತು ಆದ್ಯತೆಗಳನ್ನು ಮರು ಪ್ರಶ್ನಿಸಿಕೊಳ್ಳಬೇಕಾದ ಒತ್ತಡ ಕನ್ನಡದ ನವ್ಯ ಸಾಹಿತ್ಯದ ಕೊಡುಗೆಯಾಗಿತ್ತು. ಅದರ ಪರಿಧಿಯನ್ನು ದಾಟಿದ ಈ ಕಾಲಘಟ್ಟದಲ್ಲಿ ಇವರ ಕಥೆಗಳು ಹೆಣ್ಣಿಗೆ ಗಂಡಿನಿಂದ ಏನು ಬೇಕಾಗಿದೆ ಎಂಬ ಪ್ರಶ್ನೆಯನ್ನೂ ಸೂಕ್ಷ್ಮವಾಗಿ ಎತ್ತಿ ಉತ್ತರವನ್ನೂ ಮಿಂಚುವಂತೆ ಮಾಡುತ್ತವೆ.
ದೀಪದ ಮಲ್ಲಿ ಕಥಾಸಂಕಲನ “ಹುಣಸೇ ಚಿಗುರು”ಗೆ ಕತೆಗಾರ್ತಿ ದಯಾ ಗಂಗನಘಟ್ಟ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ