Advertisement

Tag: ಕೆಂಡಸಂಪಿಗೆ

ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ

ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು.
ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ

Read More

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಶುರು….

ಅಮ್ಮ ‘ಬೆಳಗಾರುತಿ ಬೆಳಗಾರತಿ ದತ್ತಾತ್ರೇಯನಿಗೆ’ ಎಂದು ಹಾಡುತ್ತಿದ್ದರೆ ಅದಕ್ಕೆಷ್ಟು ಅರ್ಥವಾಗಿತ್ತೋ… ಒಳಗೆ ಬರಲೊಲ್ಲೆ ಎಂಬಂತೆ ಹೊಸ್ತಿಲಿಗೆ ಕಾಲುಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ಅದರ ಬಲಗಾಲನ್ನು ಎತ್ತಿ ಒಳಗೆ ಇಡಿಸಿದ್ದೆವು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಅದು ಮನೆಯೊಳಗೆ ಓಡಾಡುವಾಗ ಅದನ್ನು ಎಷ್ಟು ನೋಡಿದರೂ ಸಾಲದು. ನಾವು ಕರೆದರೂ ಹತ್ತಿರ ಬರದೇ ಕುರ್ಚಿಯ ಅಡಿಗೆ ಹೋಗಿ‌ ಮಲಗುತ್ತಿತ್ತು.
ತಮ್ಮ ಮುದ್ದು ನಾಯಿಯ ಕುರಿತು ಸಂಜೋತಾ ಪುರೋಹಿತ ಬರೆಯುವ ಹೊಸ ಸರಣಿ “ಕೂರಾಪುರಾಣ”

Read More

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ