Advertisement

Tag: ಕೆಂಡಸಂಪಿಗೆ

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ

Read More

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಸಮತೆಯ ಸಂತ, ಕಾಮ್ರೇಡ್ ವಿ.ಎನ್. ಪಾಟೀಲ: ರಂಜಾನ್‌ ದರ್ಗಾ ಸರಣಿ

ಪ್ರಾಮಾಣಿಕ ರಾಜಕಾರಣಿಗಳು ತಮ್ಮ ಇಳಿವಯಸ್ಸಿನಲ್ಲಿ ಎಷ್ಟೊಂದು ಕಷ್ಟಪಡುವರು ಎಂಬುದರ ಬಗ್ಗೆ ಅರಿವಿದ್ದ ನನಗೆ ಅಂದು ಬಹಳ ಹೊತ್ತಿನವರೆಗೆ ನಿದ್ರೆ ಬರಲಿಲ್ಲ. ಪ್ರಾಮಾಣಿಕ ರಾಜಕಾರಣಿಗಳಿಗೆ ಇಂಥ ಗತಿ ಬರದೆ ಬೇರೆ ದಾರಿಯಿಲ್ಲ ಎನಿಸಿತು. ಎಷ್ಟೋ ಮರಿಪುಢಾರಿಗಳು ವಿಧಾನ ಸೌಧ, ಮಂತ್ರಿಗಳ ಮನೆ ಮತ್ತು ಶಾಸಕರ ಭವನದ ಮುಂದೆ ಕಾರಲ್ಲಿ ಸುತ್ತಾಡುವುದನ್ನು ನೋಡಿದ ನನಗೆ, ನನ್ನ ನಾಯಕನೊಬ್ಬ ಈ ರೀತಿ ಯಾವ ಸೌಲಭ್ಯಗಳೂ ಇಲ್ಲದೆ ಬದುಕುವುದನ್ನು ನೋಡಿ ಅತೀವ ಖೇದವೆನಿಸಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 69ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ