Advertisement

Tag: ಕೆಂಡಸಂಪಿಗೆ

ಒಟ್ಟಿಗೆ ಬಾಳಿದ ತೆರದಿ… : ಸುಮಾವೀಣಾ ಸರಣಿ

ನಮ್ಮಲ್ಲಿ ನಿದ್ರೆಯಲ್ಲಿ ಬೆಚ್ಚಿ ಬೀಳುವ, ಮಾತನಾಡುವವರು ಇದ್ದರು. ಜೊತೆ ಜೊತೆಗೆ ವಾಯುವಾತದ ನಾನಾ ಸದ್ದು….. ನಮ್ಮ ಕಾಲದಲ್ಲಿ ಲ್ಯಾಂಡ್ ಲೈನ್ ಫೋನ್ ಬಿಟ್ಟರೆ ಸೆಲ್ ಫೋನ್‌ಗಳು ಇರಲಿಲ್ಲ. ಇದ್ದಿದ್ದರೆ ಅದೆಷ್ಟು ವಿಡಿಯೋಗಳು ವೈರಲ್ ಆಗುತ್ತಿದ್ದವೋ ಏನೋ? ಗೊತ್ತಿಲ್ಲ! ಆದರೂ ಒಬ್ಬಾಕೆ ನಿದ್ರೆಯಲ್ಲಿ ಓಡಾಡುತ್ತಿದ್ದಳು. ಅದೊಂದು ಡಿಸಾರ್ಡರ್‌ ಎನ್ನುತ್ತಾರೆ. ಅವರನ್ನು ತಕ್ಷಣಕ್ಕೆ ಎಬ್ಬಿಸಬಾರದು ಇತ್ಯಾದಿ ಇತ್ಯಾದಿ……
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಕಿರಾಣಿ ಅಂಗಡಿ ಮತ್ತು ಅಮ್ಮ ಎಂಬ ಬೆರಗು: ಮಾರುತಿ ಗೋಪಿಕುಂಟೆ ಸರಣಿ

ಬಂದಿದ್ದವರು ಅನುಕೂಲದ ಕುಟುಂಬದವರು. ಮನೆಯ ಗೌರವ ಉಳಿಸುವ ಸಂಕಷ್ಟ ಅಮ್ಮನಿಗೆ. ಇಂತಹ ಸಂದರ್ಭದಲ್ಲಿ ಅಮ್ಮ ಅದ್ಹೇಗೆ ನಿಭಾಯಿಸುತ್ತಿದ್ದಳು ಎಂಬುದು ನನಗೆ ಯಾವಾಗಲೂ ಬೆರಗು. ಇಂದಿಗೂ ಅಮ್ಮ ಅಂದ್ರ ಅದೊಂದು ತಣಿಯಲಾರದ ಆಶ್ಚರ್ಯ. ಅವರು ಆ ದಿನ ಮನೆಯಲ್ಲಿಯೆ ಉಳಿದರು. ಬೆಳಗ್ಗೆ ಅವರಿಗೆ ಅಮ್ಮ ಒಗ್ಗರಣೆಯ ಅನ್ನವನ್ನು ಮಾಡಿದ್ದಳು. ಅವರು ತುಂಬಾ ಚೆನ್ನಾಗಿದೆ ಎಂದು ಉಪಾಹಾರ ಸೇವಿಸಿ ಊರಿಗೆ ಹೊರಟುಹೋದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತೈದನೆಯ ಕಂತು

Read More

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ವಿದೇಶದಲ್ಲಿ ಸ್ವದೇಶೀ ಘಮಲು…: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕೆಯಲ್ಲಿ ಎಲ್ಲ ಕಡೆ ಇರುವಂತೆಯೇ ಅಲ್ಲೊಂದು ಕನ್ನಡ ಸಂಘ ಇದೆ. ತುಂಬಾ ವಿಶಿಷ್ಟವಾದ ಕನ್ನಡಿಗರ ಬಳಗ ಅದು. ಎಲ್ಲ ಕನ್ನಡಿಗರು ಸೇರಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಚರಿಸುತ್ತಾರೆ ಅಂತ ತಿಳಿಯಿತು. ಮುಂದೆ ಬರುವ ಒಂದು ಕಾರ್ಯಕ್ರಮದಲ್ಲಿ ಕೆಲವರು ಸೇರಿ ಒಂದು ಸಣ್ಣ ನಾಟಕ ಮಾಡುವ ಉತ್ಸಾಹದಲ್ಲಿದ್ದರು. ಅದೇ ವೇಳೆ ನಾನು ಬಂದಿದ್ದೆನಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಆರನೆಯ ಬರಹ

Read More

ಆಶಾ ಜಗದೀಶ್ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ…

ಪ್ರೀತಿ ಮಾತ್ರ ಪೂರ್ಣ ಸತ್ಯ. ಮೋಸ ಎಂಬುದು ಅರ್ಧ ಸತ್ಯ. ನಾವು ಯಾರನ್ನೂ ಮೋಸಗೊಳಿಸಲು ಸಾಧ್ಯವಿಲ್ಲ. ನಮ್ಮಿಂದ ನಾವೇ ಪದೇ ಪದೇ ಮೋಸಹೋಗುತ್ತೇವೆ. ಅದೂ ಹೃದಯವಿದ್ರಾವಕವಾಗಿ. ನಮ್ಮನ್ನು ನಾವೇ ನೋಯಿಸಿಕೊಂಡು ಇತರರನ್ನು ದೂರುತ್ತೇವೆ… ನಿನ್ನನ್ನು ಪ್ರೀತಿಸದಿರಲು ಸಾಧ್ಯವಾಗುವುದಾ…
ಆಶಾ ಜಗದೀಶ್ ಬರೆಯುವ ಬದುಕೆಂಬ ಭಾವಗೀತೆಯ ಕುರಿತ ಹೊಸ ಅಂಕಣ “ಆಶಾ ಲಹರಿ” ಇಂದಿನಿಂದ ಮಂಗಳವಾರಗಳಂದು ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ