ಪೂರ್ವಕ್ಕೆ ಒಂದು ಅಪೂರ್ವ ಪಯಣ
ನಿಡಿತವಾದ ಕತೆಯ ಹಂದರವಿರುವ ಈ ಕೃತಿಯು ಒಂದು ತಾತ್ವಿಕ ಪ್ರಬಂಧದ ಹಾಗೆಯೆ ಇದೆ. ಅದು ಎತ್ತುವ ಬಹುಮುಖ್ಯ ಪ್ರಶ್ನೆಗಳು ಚರಿತ್ರೆ, ಬರಹ, ಆತ್ಮ ಜಿಜ್ಞಾಸೆ ಇವುಗಳಿಗೆ ಸಂಬಂಧಪಟ್ಟಿವೆ. ಸಂಘ, ಪಯಣ ಇವೆಲ್ಲವು ನಾವು ಕಟ್ಟಿಕೊಳ್ಳುವ ರಚನೆಗಳಲ್ಲವೆ? ಎಲ್ಲರಿಗೂ ಸ್ವಂತದ ಉದ್ದೇಶವಿರುವುದಾದರೆ ಪಯಣಕ್ಕೆ ಇರುವ ಉದ್ದೇಶವೇನು? ಸಂಘವೆಂದರೆ ಏನು? ಕಟ್ಟಳೆಗಳು ಹೇಗೆ ರಚನೆಯಾಗುತ್ತವೆ? ನಿರೂಪಕನು ಸಂಘದ ನಿಯಮಗಳನ್ನು ಮುರಿದರೂ ಅವನಿಗೆ ಶಿಕ್ಷೆ ಇಲ್ಲ. ಅವನು ಹೇಳಲು ಹೊರಟಿರುವ ಕತೆಗೆ ಎಷ್ಟೊಂದು ಎಳೆಗಳಿವೆಯಲ್ಲ?
ಕೆ. ಪ್ರಭಾಕರನ್ ಅನುವಾದಿಸಿದ ಜರ್ಮನಿಯ ಹರ್ಮನ್ ಹೇಸ್ ಬರೆದ ಕಾದಂಬರಿ ‘ಪೂರ್ವದೆಡೆಗಿನ ಪಯಣ’ ಕೃತಿಗೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ