Advertisement

Tag: ಕ್ರಿಕೆಟ್

ಕಪಿಲ್ ದೇವ್ ಮತ್ತು ಧೋಣಿ ಎಂಬ ಅಮೂಲ್ಯ ರತ್ನಗಳು

ಧೋಣಿ ಗೆದ್ದ ಕಪ್ಪನ್ನು ಚಿಕ್ಕವರಾದ ಜೊಗಿಂದರ್ ಮತ್ತು ಶ್ರೀಶಾಂತರಿಗೆ ಕೊಟ್ಟು ಕೊನೆಯಲ್ಲಿ ಹೋಗಿ ನಿಂತರು. ಅಂದಿನಿಂದ ಅದೇ ಅವರು ತಂದ ಹೊಸ ಪದ್ಧತಿ. ಅವರು ಕಪ್ಪನ್ನು, ಟ್ರೋಫಿಯನ್ನು ತಂಡದ ಹೊಚ್ಚ ಹೊಸಬರಿಗೆ ಕೊಟ್ಟು ಕೊನೆಯಲ್ಲಿ ಮಿಕ್ಕವರ ಜೊತೆ ನಿಲ್ಲುತ್ತಿದ್ದರು. ಗೆದ್ದಾಗಲೂ ಗದ್ದಲ ಮಾಡದೆ, ಸೋತಾಗಲೂ ಬಹಳ ಕುಗ್ಗದೆ, ಮುಂದೆ ಏನು ಮಾಡಬೇಕೂಂತ ಯೋಚಿಸುತ್ತಿದ್ದರು. ಒಬ್ಬ ಸ್ಥಿತಪ್ರಜ್ಞ ಹೇಗಿರುತ್ತಾನೆ, ಹೇಗೆ ವರ್ತಿಸುತ್ತಾನೆ ಎಂಬ ದರ್ಶನ ಪ್ರೇಕ್ಷಕರಿಗೆ ಮತ್ತು ಟಿವಿಯಲ್ಲಿ ನೋಡುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಅವರನ್ನು ನೋಡಿದಾಗ ಸಿಗುತ್ತಿತ್ತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಟಿ20 ವಿಶ್ವ ಕಪ್ 2022 ಮತ್ತು ಅದರ ಚರಿತ್ರೆ

ಆಟದಲ್ಲಿ ಸೋಲು, ಗೆಲುವು ಇದ್ದೇ ಇರುತ್ತೆ. ಭಾರತದಲ್ಲಿ ಹಾಗೂ ಏಷ್ಯಾದಲ್ಲಿ ಪ್ರೇಕ್ಷಕರು ಇದನ್ನು ಎಷ್ಟರ ಮಟ್ಟಿಗೆ ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆಂದರೆ, ನಮ್ಮ ಆಟಗಾರರು ಗೆದ್ದರೆ, ಅವರನ್ನು ಅಟ್ಟಕ್ಕೆ ಏರಿಸುತ್ತೇವೆ; ಹಾಗೆಯೇ ಸೋತರೆ ಅವರನ್ನು ಪಾತಾಳಕ್ಕೆ ಇಳಿಸಿ ಬಿಡುತ್ತೇವೆ! ಇದೊಂದು ದೌರ್ಭಾಗ್ಯವೇ ಸರಿ. ನಾವು ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಬೇಕು. ಯಾರಿಗೂ ಸೋಲುವುದಕ್ಕೆ ಇಷ್ಟವಿರುವುದಿಲ್ಲ. ಪಂದ್ಯದಲ್ಲಿ ಯಾರಾದರೂ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟಿ20 ವಿಶ್ವ ಕಪ್ ಕುರಿತ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ

Read More

ಇ.ಆರ್. ರಾಮಚಂದ್ರನ್ ಹೊಸ ಅಂಕಣ “ಕ್ರಿಕೆಟಾಯ ನಮಃ” ಇಂದಿನಿಂದ ಶುರು

‘ನೋಡಿ. ಇಂಗ್ಲೆಂಡಿನಲ್ಲೂ ಇದೆ ಪ್ರಾಬ್ಲಮ್ ಆಗಿತ್ತು. ಅದಕ್ಕೆ ಅಲ್ಲಿ ಸೋತರು. ನನಗೆ ಒಂದು ಐಡಿಯಾ ಹೊಳೆದಿದೆ. ರಾಣಿ ಎಲಿಜಬೆತ್ ಕಾಲವಾದಮೇಲೆ ಬಕಿಂಗ್ಹ್ಯಾಮ್ ಪ್ಯಾಲೇಸ್ ಅರ್ದಕ್ಕರ್ಧ ಖಾಲಿ ಇರುತ್ತೆ. ಮುಂದಿನ ಟೂರ್ನಲ್ಲಿ ನಮ್ಮ ಪ್ಲೇಯರ್ಸ್ ಅಲ್ಲಿ ತಂಗಿದರೆ ಸೇಫ್ ಮತ್ತು ಕಿರಿಕಿರಿ- ಫ್ರಿ. ಅಲ್ಲಿ ಕರೀಪ್ಯಾಂಟು ಕೆಂಪು ಕೋಟು ಮತ್ತು ಮೂತಿ ಮುಚ್ಚಿತೋ ಅನ್ನುವ ಹಾಗೆ ಕರಿ ಟೋಪಿ ಹಾಕಿರುವ ‘ರಾಯಲ್ ಗಾರ್ಡ್ಸ್’ ನ ಸೆಕ್ಯುರಿಟಿಗೆ ಹಾಕಬಹುದು.
ಆಂಗ್ಲ ಭಾಷೆಯ ಹಿರಿಯ ಕ್ರಕೆಟ್ ಅಂಕಣಕಾರ ಇ. ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಲಘು ಬರಹಗಳ ಅಂಕಣ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ