Advertisement

Tag: ಗಂಟಿಚೋರರ ಕಥನಗಳು

ಇರಾನ್ ದೇಶಕ್ಕೆ ತೆರಳಿದ್ದ ಕ್ರೀಡಾಪಟು ಅರ್ಜುನ ಬಸಪ್ಪ ಗಾಯಕವಾಡ

ಗಂಟಿಚೋರ್ ಸಮುದಾಯದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಕ್ರೀಡಾಪಟು ಅಂದರೆ, ಅರ್ಜುನ ಬಸಪ್ಪ ಗಾಯಕವಾಡ. ಕ್ಷೇತ್ರಕಾರ್ಯದಲ್ಲಿ ರಾಯಭಾಗ ಸಮೀಪದ ಶಾಹು ಪಾರ್ಕ್ ನೋಡಲು ಹೋದಾಗ ನಮ್ಮ ಜತೆಗೆ ಎ.ಬಿ. ಗಾಯಕವಾಡ ಅವರ ಮಗ ವಿಜಯ್ ನಮ್ಮ ಜೊತೆಗೆ ಬಂದಿದ್ದರು. ತನ್ನ ತಂದೆಯ ಕ್ರೀಡಾ ಸಾಹಸವನ್ನು ವಿವರಿಸಿದರು. ಗಾಯಕವಾಡರ ರಾಯಭಾಗದ ಮನೆಗೆ ಹೋಗಿದ್ದೆವು. ಅಲ್ಲಿ ಗಾಯಕವಾಡರು ಕ್ರೀಡೆಯಲ್ಲಿ ಭಾಗವಹಿಸಿದ ಫೋಟೋ ಚಿತ್ರಗಳು ನೋಡಲು ಸಿಕ್ಕವು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಇಪ್ಪತ್ತಮೂರನೆಯ ಕಂತು

Read More

ಮಗುವಿನ ಹಣೆಬರಹ ಬರೆಯುವ ಸೆಟಿಗೆವ್ವ

ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳು ಈ ಸಮುದಾಯದಲ್ಲಿ ಬಹು ಹಿಂದಿನಿಂದಲೆ ನಡೆದಿವೆ.  ಈ ಪರಂಪರೆ ಈಗಲೂ ವಿರಳವಾಗಿ ಮುಂದುವರಿದೆ. ತಮಗಿಂತ ಮೇಲಿನ ಸಮುದಾಯಗಳಲ್ಲಿ ಮತ್ತು ಸಮನಾಂತರ ಎಂದು ಭಾವಿಸಿದ ಸಮುದಾಯಗಳಲ್ಲಿ ಮದುವೆ ನಡೆದಿರುವುದು ಹೆಚ್ಚು. ತಮಗಿಂತ ಕೆಳಗಿನವರು ಎಂದು ಭಾವಿಸಿದ ಸಮುದಾಯಗಳ ಜತೆ ಮದುವೆ ಸಂಬಂಧಗಳು ಕಡಿಮೆ. ಹುಟ್ಟಿನಿಂದ ಸಾವಿನವರೆಗೆ ನಡೆಸುವ ಆಚರಣೆಗಳು ವಿಭಿನ್ನವಾಗಿವೆ.  ಡಾ. ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹದಿನೈದನೇ ಕಂತು. 

Read More

ಭಾರತ್ ಬ್ಲೇಡಿನ ಲಕ್ಷೆ ಮತ್ತು ಮನೆಕನ್ನದ ಕತೆಗಳು

ಮಹಿಳೆಯರು ಗಂಟಿಚೋರ್ ಸಮುದಾಯದ ಎಲ್ಲಾ ಸಂಗತಿಗಳಲ್ಲಿಯೂ ಪಾಲುದಾರರಾಗಿದ್ದರು. ತುಡುಗುತನದಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಕುತೂಹಲಕಾರಿಯಾಗಿದೆ. ಗುಂಪಾಗಿ ತುಡುಗು ಮಾಡುವುದಕ್ಕಿಂತ ಒಂಟಿಯಾಗಿ ತುಡುಗು ಮಾಡುವ ಪ್ರಮಾಣ ಹೆಚ್ಚಾಗಿತ್ತು. ಹಾಗಾಗಿ ಗಂಟಿಚೋರರ ತುಡುಗುತನದ ಪ್ರವೃತ್ತಿಯಲ್ಲಿ ಮಹಿಳೆಯರ ಪಾಲುದಾರಿಕೆ ವಿಶೇಷವಾಗಿದೆ. ಇವರಲ್ಲಿಯೂ ಪ್ರಾದೇಶಿಕವಾಗಿ ತುಂಬಾ ಪ್ರಸಿದ್ಧಿಯನ್ನು ಪಡೆದ ಮಹಿಳೆಯರೂ ಇದ್ದಾರೆ. ‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಅರುಣ್ ಜೋಳದ ಕೂಡ್ಲಿಗಿ ಬರೆದ ಬರಹ ಇಲ್ಲಿದೆ. 

Read More

ಗಂಟಿಚೋರರ ತುಡುಗಿನ ಲೋಕ

ಇದೊಂದು ಭಿನ್ನವಾದ ಕಳವು. ಮೊದಲೇ ಇಂತಹ ಊರಲ್ಲಿ ನಾಟಕ, ಬಯಲಾಟ ಅಥವಾ ಪಾರಿಜಾತ ನಡೆಯುವ ಸುದ್ದಿ ತಿಳಿದು, ಆ ನಾಟಕದ ರಾತ್ರಿ ಕಳ್ಳತನ ಮಾಡುವುದಕ್ಕೆ ಆಯಾ ಊರುಗಳಲ್ಲಿ ಮೊದಲೇ ಸುತ್ತಿ ಶ್ರೀಮಂತರ ಮನೆಗಳನ್ನು ಗುರುತು ಮಾಡಿ ತುಡುಗು ಮಾಡುತ್ತಿದ್ದರು. ಮುಖ್ಯವಾಗಿ ಹಿಂದೆ ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ನಾಟಕಗಳು ನಡೆಯುತ್ತಿದ್ದುದರಿಂದ ಇದರ ಲಾಭವನ್ನು ಗಂಟಿಚೋರರು ತುಡುಗು ಮಾಡಲು ಬಳಸುತ್ತಿದ್ದರು. ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಐದನೆಯ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ