Advertisement

Tag: ಗಿರಿಧರ್ ಗುಂಜಗೋಡು

ಮರುಭೂಮಿಯ ಹೂ ರಕ್ಷಿಸಿದ “ಸಫಾ” ಎಂಬ ಮತ್ತೊಂದು ಹೂ

ವಾರಿಸ್ ಜಿಬೂತಿಗೆ ಬಂದಾಗ ಸಫಾಳಿಗೆ ಅವಳ ಸಾಂಗತ್ಯ ಸ್ವರ್ಗವನ್ನೇ ಸಿಕ್ಕಿದ ಹಾಗೆ ಮಾಡುತ್ತದೆ. ಹೋಟೆಲಿನಲ್ಲಿ ಸಿಗುವ ಬರ್ಗರ್ ಮತ್ತು ಇತರೇ ಮಾಂಸದ ಅಡುಗೆಗಳು ಅವಳಿಗೆ ತೀರಾ ಕೈಗೆಟುಕದ ವಸ್ತುಗಳಾಗಿದ್ದ ಕಾರಣ ಅತ್ಯಂತ ಖುಷಿಯಿಂದ ಆಸ್ವಾದಿಸುತ್ತಾಳೆ. ಆದರೆ ಅವಳು ಹೋಟೆಲಿನ ಈಜುಕೊಳದಲ್ಲಿ ಈಜುಡುಗೆ ಧರಿಸಿ ಈಜುವುದನ್ನು ನೋಡಿದಾಗ ಅಚಾನಕ್ಕಾಗಿ ಬಂದ ಅವಳ ತಂದೆ ಕ್ರುದ್ಧನಾಗುತ್ತಾನೆ. ಆದರೆ ಹಣ ಅವನ ಬಾಯನ್ನು ಸುಲಭವಾಗಿ‌ ಮುಚ್ಚಿಸುತ್ತದೆ. ನಿಧಾನಕ್ಕೆ ಸಫಾಳ ಕುಟುಂಬದ ಮನವೊಲಿಸುವಲ್ಲಿ ಯಶಸ್ವಿಯಾದ ವಾರಿಸ್ ಸಫಾಳನ್ನು ಕರೆದೊಯ್ಯುವ ಪ್ರಯತ್ನ ಮುಂದುವರೆಸುತ್ತಾರೆ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ

ಇದು ಅನಿರೀಕ್ಷಿತ ತಿರುವುಗಳಿಲ್ಲದ, ಊಹಿಸಲಾಧ್ಯವಾದ ಸಂಗತಿಗಳಿರುವ ಕಾದಂಬರಿಯೂ ಅಲ್ಲ. ಪ್ರಧಾನ ಕತೆ ಒಂದು ಕಾದಂಬರಿಯಾಗಿ ಸಾಗಲು ಒಂದು ನೆಪವಷ್ಟೇ. ಮುಖ್ಯವಾಗಿ ಮಧ್ಯಘಟ್ಟ ಆ ಭಾಗದ ಮಲೆನಾಡಿನ ೭೦-೮೦ ವರ್ಷಗಳ‌ ಹಿಂದಿನ ಜೀವನ ಪದ್ಧತಿ, ನಿಸರ್ಗದ ಜೊತೆಗಿನ ಸಂಬಂಧ, ಆಹಾರ ಪದ್ಧತಿ, ಕಷ್ಟ ಸುಖಗಳು, ವಿವಿಧ ಸಮುದಾಯಗಳು‌ ಮತ್ತು ಆ ಸಮುದಾಯಗಳ‌ ನಡುವಣ ಅನುಬಂಧ, ವಿಶಿಷ್ಟವಾದ ನಾಟೀ ಔಷಧಿಗಳು ಇತ್ಯಾದಿಗಳ ಕುರಿತು ಬಹಳ ಆಪ್ತವಾಗಿ ಹೇಳುತ್ತಾ ಹೋಗುತ್ತದೆ‌.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಚಿತ್ತಾಲರ ಕಾದಂಬರಿ ಪ್ರಪಂಚದಲ್ಲಿ ಒಂದೆರಡು ಹೆಜ್ಜೆ

ಕಥಾನಾಯಕ ಪುರುಷೋತ್ತಮ, ಆತನ ತಾಯಿ ಮತ್ತು ಬಳಗದ ನಡುವೆ ನಡೆಯುವ ಕಥಾನಕಗಳೇ ಈ ಕಾದಂಬರಿಯ ವಸ್ತು. ಜೊತೆಗೆ ಒಂದು ಮಹಾನಗರ ಮತ್ತೂ ದೊಡ್ಡದಾಗಿ ವಿಸ್ತರಣೆಯಾಗಬೇಕಾದರೆ ನಡೆಯುವ ತಲ್ಲಣಗಳು, ಹಣ ಅಧಿಕಾರದ ಮುಂದೆ ಮಾನವೀಯತೆ ಗೌಣವಾಗಿ ತನ್ನ ಸ್ವಾರ್ಥಕ್ಕಾಗಿ ಯಾವ ಕೆಲಸಕ್ಕೂ ಇಳಿಯಬಹುದಾದ ಮನುಜನ ಕ್ರೂರತನ, ತನ್ನ ಪ್ರೀತಿಯ ನೆಲವನ್ನು ಉಳಿಸಿಕೊಳ್ಳಲು ಎಲ್ಲಾ ಸ್ವಾರ್ಥಗಳ ಬಿಟ್ಟು ಮಾಡುವ ಹೋರಾಟ ಎಲ್ಲವೂ ಬಹಳ ಸುಂದರವಾಗಿ‌ ನಿರೂಪಿತಗೊಂಡಿದೆ
ಓದುವ ಸುಖ ಅಂಕಣದಲ್ಲಿ ಯಶವಂತ ಚಿತ್ತಾಲರ ಮೂರು ಕೃತಿಗಳ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ಜೋಕು ಮಾಡಲು ಬಳಸುತ್ತಿದ್ದ ಪದದ ನಿಜ ಅರ್ಥ ತಿಳಿಯಿತು

ಮೋಹನ ಸ್ವಾಮಿ ಒಂದು ಕಥಾ ಸಂಕಲನವಾದರೂ ನಿಧಾನವಾಗಿ LGBT ಸಮುದಾಯದೆಡೆಗಿನ ನನ್ನ ಮನೋಭಾವನೆಯನ್ನು ಬದಲಾಯಿಸಿಕೊಳ್ಳಲು ಸಹಾಯಮಾಡಿತು. ನನ್ನೆದುರು ಆ ಸಮುದಾಯದ ವ್ಯಕ್ತಿಗಳು ಸಿಕ್ಕಾಗ ಮಾಮೂಲಿ ಗಂಡು ಹೆಣ್ಣುಗಳ ಹಾಗೇ ಮಾತನಾಡಲು, ಹರಟೆ ಹೊಡೆಯಲು ಸಾಧ್ಯವಾಯಿತು. ಹಾಗಾದರೆ ನಾನು ಈ ವಿಚಾರಲ್ಲಿ ನನ್ನ ಯೋಚನೆಯನ್ನು ನೂರಕ್ಕೆ ನೂರು ಬದಲಿಸಿಕೊಂಡೆನೇ? ಎಂದು ಕೇಳಿದರೆ ಉತ್ತರ ಗೊತ್ತಿಲ್ಲ, ಅಥವಾ ಇಲ್ಲವೆನ್ನಿಸುತ್ತದೆ.
ಓದುವ ಸುಖ ಅಂಕಣದಲ್ಲಿ ವಸುಧೇಂದ್ರರ “ಮೋಹನಸ್ವಾಮಿ” ಕೃತಿಯ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ರಾಜಕೀಯ ಹಾದಿಯಲ್ಲಿ ಕಂಡ ಪ್ರಾಮಾಣಿಕ ನುಡಿಗಳು

ಬಿ.ಎ. ಮೊಹಿದೀನ್ ಅವರು ಜೀವನದಲ್ಲಿ ಇಟ್ಟುಕೊಂಡ ಮೌಲ್ಯಗಳು ಅನುಕರಣೀಯವಾದುದು. ತಾನು ಚುನಾವಣೆಗೆ ನಿಂತಾಗ ಮಸೀದಿ ದೇವಾಲಯ ಚರ್ಚುಗಳಿಗೆ ಮತಕೇಳಲು ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಅದನ್ನು ಹಟಬಿಡದೇ ಪಾಲಿಸಿದವರು ಅವರು. ತಾವು ಹುಟ್ಟಿಬಂದ ಸಮುದಾಯದ ಏಳಿಗೆಗಾಗಿ ಮೊಹಿದೀನ್ ಅವರಿಗಿದ್ದ ಕಾಳಜಿ ಪ್ರಶ್ನಾತೀತವಾದುದು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ