Advertisement

Tag: ಚಂದ್ರಮತಿ ಸೋಂದಾ

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮತ್ತೆ ಸಿಗುವ ಆಶಯದ ಪಯಣ: ಚಂದ್ರಮತಿ ಸೋಂದಾ ಸರಣಿ

ಮನೆಯ ಜನರೆಲ್ಲರಿಗೂ ʻಹೋಗಿ ಬರ್ತೇನೆʼ ಎನ್ನುತ್ತ ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ಹೇಳುವುದು, ಅಲ್ಲಿಂದ ನಡುಮನೆಯಲ್ಲಿ ಕೆಲಹೊತ್ತು ಮಾತನಾಡುತ್ತ ನಿಲ್ಲುವುದು, ಅಲ್ಲಿಂದ ಜಗಲಿಗೆ, ಅನಂತರ ಹೆಬ್ಬಾಗಿಲಲ್ಲಿ ತುಸುಹೊತ್ತು ಮಾತನಾಡುತ್ತ ನಿಂತರೆ, ಹೊರಡಲು ಮುಂದಾದವರು ʻಇನ್ನೂ ಮಾತು ಮುಗಿದಿಲ್ವಾ?ʼ ಎಂದು ಕೇಳುತ್ತಲೇ ʻಬಂದೆʼ ಎಂದು ಬಾಯಲ್ಲಿ ಹೇಳಿದರೂ ಅಂಗಳದ ತುದಿಯಲ್ಲಿ ಒಂದು ಗಳಿಗೆಯ ಮಾತುಕತೆ. ಹೀಗೆ ಸಾಗುವ ವಿದಾಯದ ಕ್ಷಣ ನೆನಪಿಡುವಂಥದು. ಕೆಲವೊಮ್ಮೆ ಮನೆಗೆ ಬಂದ ಅಣ್ಣ-ತಮ್ಮಂದಿರು, ಅಥವಾ ಅಕ್ಕ-ತಂಗಿಯರನ್ನು ಕಳುಹಿಸಲು ಊರಬಾಗಿಲತನಕ ಹೋಗುವುದಿದೆ. ಎಲ್ಲರ ಎದುರಿನಲ್ಲಿ ಹಂಚಿಕೊಳ್ಳಲು ಆಗದ ಅದೆಷ್ಟೋ ಸಂಗತಿಗಳು ಅಲ್ಲಿ ವಿನಿಮಯಗೊಳ್ಳುತ್ತಿದ್ದವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಕೊನೆಯ ಕಂತು

Read More

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ