Advertisement

Tag: ಚಾಂದ್ ಪಾಷ ಎನ್ ಎಸ್

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ಧರ್ಮಗಳಲ್ಲಿ ಸಣ್ಣತನ ಮತ್ತು ಮನುಷ್ಯ ಧರ್ಮದೊಳಗಿನ ದೊಡ್ಡತನಗಳ ಸಣ್ಣ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ‘ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್ ಪಾಠವು, ‘ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಸ್ತ್ರೀಯ ಲೈಂಗಿಕ ಸ್ವಾತಂತ್ರ್ಯದ ಹಕ್ಕನ್ನು ಕೇಳುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ‘ಕೊನೆಯ ಮಳೆ’ ಯ ಹನಿಯೂ ಮನುಷ್ಯನ ಒದ್ದಾಟಗಳ ಯಥಾವತ್ತಾಗಿ ಅನುವಾದ ಮಾಡಿದ ಹಾಗಿವೆ.
ದಾದಾಪೀರ್‌ ಜೈಮನ್‌ ಅವರ “ನೀಲಕುರಿಂಜಿ” ಕಥಾಸಂಕಲನದ ಕುರಿತು ಚಾಂದ್ ಪಾಷ ಎನ್. ಎಸ್. ಬರಹ

Read More

ಚಾಂದ್ ಪಾಷ ಎನ್. ಎಸ್ ಬರೆದ ಎರಡು ಹೊಸ ಕವಿತೆಗಳು

ಅವಳ ಕಣ್ಣಿನ ಮುಗಿಲಿಂದ ಬೆಳದಿಂಗಳು ತೊಟ್ಟಿಕ್ಕುತಿದೆ,
ನೆಲವೆಲ್ಲವೂ ಕ್ಷೀರ ಸಾಗರ.
ಪರ್ವತಗಳ ತಪ್ಪಲಲಿ ಹಾಲುಣಿಸುವ ಬಳ್ಳಿ.
ಕೀಟದ ತಾಯ್ತನಕೆ ಗೂಡು ಗೂಡಲ್ಲೂ ಹೋಳಿಗೆ ಊಟ, ಬೆಳಕಿನ ಕೀರು ಪಾಯಸ.
ನಟ್ಟಿರುಳಲಿ ನಶೆ ಏರಿಸಿಕೊಂಡ ತೋರು ಬೆರಳ ನಗ್ನ ನರ್ತನ…… ಚಾಂದ್ ಪಾಷ ಎನ್. ಎಸ್ ಬರೆದ ಎರಡು ಹೊಸ ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ