ಅಹಮ್ಮಿಗೊಂದು ಪೆಟ್ಟು ಕೊಡುವ ಸಮಯ…: ಜಯಲಕ್ಷ್ಮಿ ಪಾಟೀಲ್ ಅಂಕಣ
“ಒಮ್ಮೆ ಬ್ಯಾಸಿಗಿ ಮದ್ಯಾನದಾಗ ಆಯಿ ಹಳ್ಳಕ್ಕ ನೀರ ತರಾಕ ಹೋಗಿ, ಜೋಡಗೊಡಾ ಹೊತ್ತು ಹೊಡಮಳ್ಳಿ ಬರೂದ್ರಾಗ ಮುತ್ತ್ಯಾ ಹೊಲದಿಂದ ಬಂದಬಿಟ್ಟಾನವ್ವಿ. ನೀರಡಿಶ್ಯಾನ. ಮನ್ಯಾಗ ಕುಡ್ಯಾಕ ಮುಕ್ಕ್ ನೀರಿಲ್ಲ. ಮುತ್ತ್ಯಾ ತಾಪಗೆದ್ದು, “ಹಾಂ ಅಧೆಂಗ ನೀ ಇಟ್ಟ್ ತಡಾ ಮಾಡೀದಿ ಬರಾಕ! ನಡಿ ರಂಡಿ ನೀ ಅದ ಹಳ್ಳದ್ ದಂಡ್ಯಾಗ ಇರು. ಅಲ್ಲೇ ನಿಂದ್ರು. ದsರ್’ಕರ್ತಾ ಕೊಡಾ ಕೆಳಗಿಳಿಶಿ ಕುಂತೆಪಾ ಅಂದ್ರ ನಿನ್ನ ಸಿಗದು ಅಗಶಿ ಬಾಗಲಕ್ಕ ತೋರ್ಣಾ ಕಟ್ತತೀನಿ ಹುಶಾರ್!” ಅಂತಂದು, ಕೊಡದ ದರ್ಶಿಲೆ ಆಯಿನ್ನ ಕಾದ ಉಸಕಿನ ಮ್ಯಾಲ ಬರೆಗಾಲಿಲೇ ನಿಂದ್ರಿಶಿದ್ನಂತ.”
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ
