Advertisement

Tag: ಡಾ. ಎಲ್.ಜಿ. ಮೀರಾ

ಸಂತೆಯಲ್ಲಿ ಸಂತರು ರಚಿಸಿದ ನುಡಿರತ್ನಗಳು : ಕನ್ನಡದ ತತ್ವಪದಗಳು: ಡಾ. ಎಲ್.ಜಿ.ಮೀರಾ

ಹೀಗೆ ಹಾಡುತ್ತಿರುವಾಗ ಕೆಲವರು ಮೂಲಕವಿಯ ಅಂಕಿತವನ್ನು ಬದಲಿಸಿ ತಮ್ಮ ನಡುವಿನ ಇಲ್ಲವೆ ದೇವರ ಹೆಸರುಗಳನ್ನು ಸೇರಿಸುವುದುಂಟು. ಆದರೆ ಇವು ಜನಪದರು ಹಾಡುತ್ತಿದ್ದ ಹಾಡುಗಳು ಎಂಬ ಕಾರಣದಿಂದಾಗಿ ಪಂಡಿತರು ಇವನ್ನು ಉಪೇಕ್ಷೆ ಮಾಡುತ್ತಿದ್ದರು. ಹೀಗಾಗಿ ಇವುಗಳ ಸಂಗ್ರಹಕಾರ್ಯ ವಿಳಂಬವಾಯಿತು. ಅವು ಹಾಡಿನ ರೂಪದಲ್ಲಿ ಇದ್ದುದರಿಂದ ಜನರ ಬಾಯಲ್ಲಿ ಹೇಗೋ ಉಳಿದುಕೊಂಡು ಅಳಿಯದೆ ಪ್ರಸಾರವಾಗುತ್ತಾ ಬಂದಿವೆ. ಜಾತಿಧರ್ಮಗಳನ್ನು ಮೀರಿ, ಈ ನೆಲದ ತತ್ವಚಿಂತನೆಯನ್ನು ನಿಸರ್ಗ ವಿವೇಕದ ಜೊತೆ ಬೆರೆಸುತ್ತ ಸಮಾಜದ ಚಿಂತನಾಕ್ರಮವನ್ನು ಆರೋಗ್ಯಕರವಾಗಿರುವಂತೆ ಈ ತತ್ವಪದಗಳು ನೋಡಿಕೊಂಡಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ವಿದ್ಯೆ ಹಾಗೂ ವಿವೇಕ – ಒಟ್ಟಿಗೆ ಇರುವುದಿಲ್ಲವೆ?: ಡಾ. ಎಲ್.ಜಿ. ಮೀರಾ ಅಂಕಣ

ವಿದ್ಯೆ ಮತ್ತು ವಿವೇಕದ ಪ್ರಶ್ನೆ ಬಂದಾಗ ನಮ್ಮ ಗ್ರಾಮೀಣ ಜನರಲ್ಲಿ ಸಾಕಷ್ಟು ವಿವೇಕವಿರುವುದನ್ನು ನಾವು ಗಮನಿಸುತ್ತೇವೆ. ಉದಾಹರಣೆಗೆ, ಭೂಮಿಯನ್ನು ಲಾಭ ತರುವ ಸರಕು ಎಂದು ನೋಡದೆ ತಾಯಿ ಎಂದು ಕರೆಯುವುದು, ಪರಿಸರವನ್ನು ಹಾನಿಗೊಳಪಡಿಸದಿರುವುದು, ಪ್ರಾಣಿ-ಪಕ್ಷಿ- ಪುಟ್ಟ ಪುಟ್ಟ ಜೀವಗಳಿಗೂ ತಮ್ಮ ಬದುಕಿನಲ್ಲಿ ಸ್ಥಳಾವಕಾಶ ಮಾಡಿಕೊಡುವುದು, ಮಣ್ಣು ಅಂದರೆ ನಗರದವರಂತೆ ಅಸಹ್ಯ ಪಟ್ಟುಕೊಳ್ಳದೆ ಇರುವುದು, ಮನೆಯಲ್ಲಿ ಮಾಡುವ ಸರಳ ಅಡಿಗೆಗಳಲ್ಲಿ ಸಂತೋಷವನ್ನು ಕಾಣುವುದು‌, ದೊಡ್ಡ ದೊಡ್ಡ ಕುಟುಂಬಗಳಲ್ಲಿ ಹೊಂದಿಕೊಂಡು ಹೋಗುವುದು‌ – ಇಂತಹ ಅನೇಕ ಜೀವನ ವಿವೇಕದ ನಿದರ್ಶನಗಳನ್ನು ನಾವು ಅವಿದ್ಯಾವಂತರಾದ ನಮ್ಮ ಹಳ್ಳಿಗರಲ್ಲಿ ಕಾಣಬಹುದು.‌
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

 ಎಐ ಯುಗ, ಹುಡುಕಾಟ, ಚಾರಣಪ್ರೀತಿ ಹಾಗೂ `ಘಾಂದ್ರುಕ್’…: ಡಾ. ಎಲ್.ಜಿ. ಮೀರಾ ಅಂಕಣ

`ಮೋಕ್ಷ ಹುಡುಕುತ್ತಾ ಪ್ರೀತಿಯ ಬಂಧನದಲ್ಲಿ’ – ಲಂಕೇಶರ ಲೇಖನ ನೆನಪಾಗುತ್ತೆ. ಬಿಟ್ಟೇನೆಂದರೂ ಮನುಷ್ಯನಿಗೆ ಮನುಷ್ಯರ ಸಹವಾಸವನ್ನು ಬಿಡಲು ಸಾಧ್ಯವೇ? `ಯಾರ ಹತ್ತಿರವೂ ನಾನು ಮಾತಾಡುವುದಿಲ್ಲ, ಮನುಷ್ಯರ ಸಹವಾಸವೇ ಬೇಡ’ ಎಂದುಕೊಂಡ ಸಿದ್ಧಾರ್ಥನು ಕೆಲವು ದಿನ ಹೀಗಿದ್ದರೂ ನಂತರ ನಿಧಾನವಾಗಿ ಮನುಷ್ಯರ ಸಂಗ, ಸಹವಾಸ ಬೆಳೆಸುತ್ತಾ ಹೋಗುವುದು, ಸೋಫಿಯಾಳ ಪ್ರೀತಿಯಲ್ಲಿ ತಲ್ಲೀನನಾಗುವುದು, ಹಾಗೂ ತಾನು ನೋಡಿದ ವಿವರಣೆಗೆ ಮೀರಿದ ಹಿಂಸೆಯಿಂದ ಮನುಷ್ಯರ ಬಗೆಗೆ ತೀವ್ರ ಅಪನಂಬಿಕೆ ಬೆಳೆಸಿಕೊಂಡಿದ್ದ ಸೋಫಿಯಾಳು ಸಿದ್ಧಾರ್ಥನನ್ನು ಹೃದಯಕ್ಕೆ ಹಚ್ಚಿಕೊಳ್ಳುವುದು – ಇವು ಏನನ್ನು ಸೂಚಿಸುತ್ತವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ದೇಹ ಮನಸ್ಸುಗಳ ಚಕ್ರಸುಳಿ……: ಡಾ. ಎಲ್.ಜಿ. ಮೀರಾ ಅಂಕಣ

ಮನಸ್ಸು ಮತ್ತು ಆತ್ಮ ಎಂದರೆ ಒಂದೆಯೇ ಅಥವಾ ಬೇರೆಬೇರೆಯೇ ಎಂಬ ನಮ್ಮ ಪ್ರಶ್ನೆಗೆ ಧರ್ಮಶಾಸ್ತ್ರ ಹಾಗೂ ತತ್ವಶಾಸ್ತ್ರಗಳು ಕೊಡುವ ಉತ್ತರ “ಇಲ್ಲ, ಅವು ಬೇರೆ ಬೇರೆ. ಆತ್ಮವು ಚಿರಂತನವಾದ, ಎಂದೂ ಬದಲಾಗದ ಮೂಲಸತ್ವ ಅಥವಾ ಶುದ್ಧಪ್ರಜ್ಞೆ” ಎಂದು. ಕಡುವಿಜ್ಞಾನವು ಆತ್ಮದ ಅಸ್ತಿತ್ವವನ್ನು – ವಾಸ್ತವಿಕ ಸಾಕ್ಷಿಗಳ ಕೊರತೆಯ ಕಾರಣಕ್ಕಾಗಿ – ಒಪ್ಪುವುದಿಲ್ಲ. ಸದ್ಯಕ್ಕೆ ಈ ಪ್ರಬಂಧದಲ್ಲಿ ಆತ್ಮವನ್ನು ಕುರಿತು ಚರ್ಚಿಸುತ್ತಿಲ್ಲ. `ಮನಸ್ಸಿನ’ ಸಂಕೀರ್ಣತೆಯೇ ಇಲ್ಲಿ ನಮಗೆ ಸಾಕಷ್ಟು ನೀರು ಕುಡಿಸುತ್ತಿದೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತೊಂದನೆಯ ಬರಹ

Read More

ಬದುಕಿನ ರಾಗದ ಅವರೋಹಣ – ವೃದ್ಧಾಪ್ಯವೆಂಬ ಜೀವನಪದವಿ!: ಡಾ. ಎಲ್.ಜಿ. ಮೀರಾ ಅಂಕಣ

ಸಾಮಾನ್ಯವಾಗಿ, ಬದುಕಿನ ಈ ಹಂತದ ಸಕಾರಾತ್ಮಕ ಚಿತ್ರಣವು ಅದೃಶ್ಯವಾಗಿರುತ್ತೆ ಅಥವಾ ನಕಾರಾತ್ಮಕವಾಗಿರುತ್ತೆ. ಇದರಿಂದಾಗಿ ಈ ಜೀವನದ ಬಗ್ಗೆ ಯೋಜನೆ, ಯೋಚನೆ, ಪೂರ್ವಚಿಂತನೆಗಳು ಸರಿಯಾಗಿ ನಡೆಯುವುದಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ಆದ ಅದ್ಭುತ ಮುನ್ನಡೆಗಳಿಂದಾಗಿ ಮಾರಾಣಾಂತಿಕ ರೋಗಗಳಿಂದ ಮನುಕುಲವು ಮುಕ್ತಿ ಪಡೆದುಕೊಂಡು, ಮನುಷ್ಯನ ಸರಾಸರಿ ಆಯುಸ್ಸು ಹೆಚ್ಚಿ, ತಮ್ಮ 60ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿಗೊಂಡ ಮೇಲೂ ಜನರು ಸುಮಾರು 20ರಿಂದ 40 ವರ್ಷಗಳ ತನಕ ಬದುಕುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ