ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು”
ನೆತ್ತಿಯ ಮೇಲಿನ ಕಣ್ಣ ಸ್ವಾಮೀಜಿ ಈಗ ಸಮಾಧಾನದಲ್ಲಿದ್ದು ಬೆವರುವುದನ್ನು ನಿಲ್ಲಿಸಿದ್ದರು. ಉಂಗುರಗಳನ್ನು ಹಾಕಿದ್ದ ಹಿತ್ತಾಳೆ ಚೊಂಬಿನ ನೀರನ್ನು ಇಬ್ಬರಿಗೂ ತೀರ್ಥದಂತೆ ಕೊಟ್ಟು ತಾವೂ ಬಲಗೈ ಗೆ ಬಗ್ಗಿಸಿಕೊಂಡರು. ಸ್ವಾಮೀಜಿ ಏನು ಮಾಡುತ್ತಾರೋ ಅದನ್ನೇ ಮಾಡಲು ತಯಾರಾದ ದಂಪತಿಗಳು ಅವರನ್ನೇ ನೋಡುತ್ತಿದ್ದರು. ಸ್ವಾಮೀಜಿ ನೀರಿದ್ದ ಕೈಯನ್ನು ಎರಡೂ ಕಣ್ಣುಗಳಿಗೆ ಒತ್ತಿಕೊಂಡು ಗಟಕ್ಕೆಂದು ಆ ನೀರನ್ನು ಕುಡಿದರು. ನಂತರ ಅಂಗೈಯನ್ನು ಮುಂಡಾಸಿನ ಬಳಿ ತಗೊಂಡುಹೋದರು.
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು” ನಿಮ್ಮ ಓದಿಗೆ
