Advertisement

Tag: ಡಾ. ಬಿ. ಜನಾರ್ದನ ಭಟ್

ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

Read More

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

Read More

ಐಕ್ಯಗಾನ ಮೊಳಗಿಸಿದ, ಜನಪರ ಕವಿ ಕಯ್ಯಾರ ಕಿಞ್ಞಣ್ಣ ರೈ

1933 ರ ಹೊತ್ತಿಗಾಗಲೇ ಹದಿನೆಂಟರ ಯುವಕ ಕಯ್ಯಾರರು ಒಳ್ಳೆಯ ಕವಿಯಾಗಿ ಗುರುತಿಸಿಕೊಂಡದ್ದಕ್ಕೆ ಒಂದು ಉದಾಹರಣೆ: ಪುತ್ತೂರಿನಲ್ಲಿ ಕಾರಂತರು ನಡೆಸುತ್ತಿದ್ದ ನಾಡಹಬ್ಬದಲ್ಲಿ ಬೇಂದ್ರೆಯವರ ಅಧ್ಯಕ್ಷತೆಯ ಕವಿಗೋಷ್ಠಿಯಲ್ಲಿ ಅವರು ‘ಊರ್ಮಿಳಾ’ ಎಂಬ ಕವನ ಓದಿದರು. ಅದನ್ನು ಕೇಳಿದ ಬೇಂದ್ರೆಯವರು ಕಯ್ಯಾರ ಅವರಿಂದ ಇನ್ನೊಂದುಕವಿತೆಯನ್ನು ಓದಿಸಿದರು.
‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಕಯ್ಯಾರ ಕಿಞ್ಞಣ್ಣ ರೈ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ