Advertisement

Tag: ಡಾ.ವಿನತೆ ಶರ್ಮ

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಸ್ಯ ನೆಡುವವರ ಸಂತಸದ ಘಳಿಗೆಗಳು: ವಿನತೆ ಶರ್ಮ ಅಂಕಣ

ಚಕ್ರಮುನಿ ಸೊಪ್ಪಿನ ಗಿಡ ಖರೀದಿಗಿದ್ದದ್ದು ನೋಡಿ ನನ್ನ ಕಣ್ಣರಳಿತು! ಬೆಂಗಳೂರು, ಮೈಸೂರಿನಲ್ಲಿ ಈ ಚಕ್ರಮುನಿ ಎಲೆಗಳನ್ನು ತಿನ್ನುವ ಅಭ್ಯಾಸವಿತ್ತು. ಬ್ರಿಸ್ಬೇನ್ನಿನಲ್ಲಿ ಅಪರೂಪಕ್ಕೆ ವಾರಾಂತ್ಯ ತರಕಾರಿ-ಹಣ್ಣು ಮಾರ್ಕೆಟ್ಟಿನಲ್ಲಿ ವಿಯೆಟ್ನಮೀಸ್ ಮಾರಾಟಗಾರರು ತರುತ್ತಿದ್ದ ಚಕ್ರಮುನಿ ಸೊಪ್ಪನ್ನು ಕಂಡು ಸಂಭ್ರಮಿಸಿದ್ದೆ. ಅದನ್ನು ಕೊಂಡು ಅದರ ಕೊಂಬೆಗಳನ್ನು ನೆಟ್ಟು ಎರಡು ಬಾರಿ ಇದನ್ನು ಬೆಳೆಯಲು ಪ್ರಯತ್ನಿಸಿ ಸೋತಿದ್ದೆ. ಜೆರ್ರಿ ಅವರ ಸ್ವಾವಲಂಬಿ ಕೈತೋಟದಲ್ಲಿ ಚೆನ್ನಾಗಿ ಬೆಳೆದಿದ್ದ ಗಿಡವನ್ನು ನೋಡಿ ಸಂತೋಷವಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ