ಒಂದು ಪದ್ಯ, ಹತ್ತು ಮುಖ, ಹತ್ತು ಬಾಯಿ ಮತ್ತು ಔಚಿತ್ಯ: ಡಾ. ವಿಶ್ವನಾಥ ನೇರಳಕಟ್ಟೆ ಬರಹ
‘ವದನ’ ಎನ್ನುವ ಪದಕ್ಕೆ ಮುಖ, ಬಾಯಿ ಎನ್ನುವ ಅರ್ಥವಿದ್ದು, ತಲೆ ಎನ್ನುವ ಅರ್ಥವಿಲ್ಲ. ಆತನಿಗೆ ನಿಜವಾಗಿಯೂ ತಲೆ ಇದ್ದಿದ್ದರೆ ಸೀತೆಯನ್ನು ಅಪಹರಿಸಿ, ಬಳಿಕ ತನ್ನ ಮನಸ್ಸನ್ನು ಸರಿಮಾಡಿಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ, ಎನ್ನುವ ಭಾವ ಈ ಪದಬಳಕೆಯಲ್ಲಿ ಇದ್ದಂತಿದೆ. ‘ರಾಮಚಂದ್ರ ಚರಿತ ಪುರಾಣ’ದ ಆಧಾರದಲ್ಲಿ ಹೇಳುವುದಾದರೆ, ರಾವಣ ಪರಸ್ತ್ರೀ ವ್ಯಾಮೋಹಿ ಅಲ್ಲವೇ ಅಲ್ಲ. ಹೆಣ್ಣುಮಕ್ಕಳನ್ನು ಗೌರವಪೂರ್ಣವಾಗಿ ಕಾಣುವುದೇ ಅವನ ಸ್ವ-ಭಾವ. ಆದರೆ ಸೀತೆಯ ವಿಚಾರಕ್ಕೆ ಬಂದಾಗ ತನ್ನ ಮೂಲಗುಣವನ್ನೇ ಅವಗಣಿಸಿ ನಡೆದುಕೊಳ್ಳುತ್ತಾನೆ. ಆ ಬಳಿಕ ಇದರ ಅರಿವಾದಾಗ ತನ್ನ ಮೂಲವ್ಯಕ್ತಿತ್ವದ ಪುನರ್ಪ್ರತಿಷ್ಠಾಪನೆ ಮಾಡಿಸಿಕೊಳ್ಳುತ್ತಾನೆ.
ಕವಿ ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ’ದಲ್ಲಿನ ಪದ್ಯವೊಂದರ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ ನಿಮ್ಮ ಓದಿಗೆ

