ದಿನ ದಿನದ ಕಥನ

ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್‌ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ

Read More