Advertisement

Tag: ದರ್ಶನ್ ಜಯಣ್ಣ

ಭಾರತಕ್ಕೆ ಬಂದ ಕಾಫಿ: ದರ್ಶನ್‌ ಜಯಣ್ಣ ಸರಣಿ

ಮೊದಮೊದಲು ಇದನ್ನು ಶೈತಾನನ ಪೇಯವೆಂದು ನಿರ್ಬಂಧಿಸಿದ್ದ ಒಟ್ಟೋಮನ್ ಸುಲ್ತಾನ ನಂತರದ ದಿನಗಳಲ್ಲಿ ಇದು ಮದ್ಯ ಅಥವಾ ಮದಿರೆಯಂತಲ್ಲ ಎಂದು ಮನಗಂಡು ಸ್ವತಃ ತಾನೇ ಅದನ್ನು ಕುಡಿದು ಪರೀಕ್ಷಿಸಿ ಆ ನಿರ್ಬಂಧವನ್ನು ಸಡಿಲಿಸುತ್ತಾನೆ. ಹಾಗೆಂದ ಮಾತ್ರಕ್ಕೆ ಎಲ್ಲರಿಗೂ ಎಲ್ಲಕಾಲಕ್ಕೂ ಇದು ಸಿಗುವಂತಿರಲಿಲ್ಲ. ಸೂಫಿಗಳು, ಸೈನಿಕರು, ಸಮಾಜದ ಗಣ್ಯರು, ಆಸ್ಥಾನ ವಿದ್ವಾಂಸರು, ಅಧಿಕಾರಿಗಳಿಗೆ ಮತ್ತು ಸಮರಕ್ಕೆ ಹೊರಟವರಿಗೆ ಮಾತ್ರ ಇದು ಸೀಮಿತವಾಗಿತ್ತು ಎಂದರೆ ಇವತ್ತಿಗೆ ನಂಬಲು ಕಷ್ಟವಾಗಬಹುದೇನೋ! ಇದರ ಕಾರಣವೇ ಇಂದು ನಾವು “ಟರ್ಕಿಶ್ ಕಾಫಿಯ” ಬಗ್ಗೆ ಆಗಾಗ ಕೇಳುತ್ತಿರುತ್ತೇವೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹದಿಮೂರನೆಯ ಕಂತು

Read More

ಕಾಫಿ ಮತ್ತು ಕಾಫಿರರ ಕಥೆ!: ದರ್ಶನ್‌ ಜಯಣ್ಣ ಸರಣಿ

ಕ್ರಿಶ್ಚಿಯನ್ ದೇಶವಾದ ಇಥಿಯೋಪಿಯಾದಲ್ಲಿ ಕಾಫಿ ಉಗಮವಾದರೂ ಅದು ಪ್ರವರ್ಧಮಾನಕ್ಕೆ ಬಂದದ್ದು ಇಂದಿನ ಕಾಫಿಯಾಗಿ ರೂಪುಗೊಂಡಿದ್ದು ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ಅಂದರೆ ದಕ್ಷಿಣ ಅರೇಬಿಯಾ ಇಂದಿನ ಯೆಮೆನ್, ಸೌದಿಯ ದಕ್ಷಿಣನ ಅಭಾ ಪ್ರಾಂತ್ಯಗಳಲ್ಲಿ. ಒಟ್ಟೋಮನ್ ಸುಲ್ತಾನ ಕಾಫಿಯ ಶಕ್ತಿಯನ್ನು ಬಲ್ಲವನು ಈ ಬೀಜಗಳನ್ನು ರಫ್ತು ಮಾಡಬೇಕಾದರೆ ಹುರಿದೇ ಮಾಡಬೇಕೆಂಬ ಗಟ್ಟಿ ಫರ್ಮಾನು ಹೊರಡಿಸಿದ್ದ ಮತ್ತದು ಶತಮಾನಗಳ ಕಾಲ ಚಾಲ್ತಿಯಲ್ಲಿತ್ತು. ಇದಕ್ಕೆ ಕಾರಣ ಕಾಫಿ ಬೇರೆಲ್ಲೂ ಬೆಳೆಯಲು ಆಗಬಾರದು ಎಂಬ ಆಲೋಚನೆ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹನ್ನೆರಡನೆಯ ಕಂತು

Read More

ಮೊಹಮ್ಮದ್ ಚಾಚಾ!: ದರ್ಶನ್‌ ಜಯಣ್ಣ ಸರಣಿ

ಅವರು ಇಲ್ಲಿನ 45-50 ಡಿಗ್ರಿ ಉಷ್ಣಾಂಶವನ್ನ ಬಳಸಿಕೊಂಡು ಪ್ಲಾಸ್ಟಿಕ್‌ನ ಡಬ್ಬಿಯಲ್ಲಿ ತಾವು ತಂದ ಆಹಾರವನ್ನು ಬಿಸಿ ಮಾಡಿಕೊಳ್ಳುವುದನ್ನು ನೋಡಿ ಸಂಕಟವೂ ಆಯಿತು. ಏನಾದರೂ ಮಾಡಬೇಕಲ್ಲ ಎಂದು ಯೋಚಿಸುವಾಗ ಒಂದು ಹೊಸ tupperware ನ ಊಟದ ಡಬ್ಬಿಯನ್ನು ತಂದುಕೊಡುವುದು ಸೂಕ್ತ ಅಂತ ಅನ್ನಿಸಿತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹನ್ನೊಂದನೆಯ ಕಂತು

Read More

ಅವಳಿ ನಗರಗಳ ದರ್ಶನ: ದರ್ಶನ್‌ ಜಯಣ್ಣ ಸರಣಿ

ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗಳ ಹಿಂದೆ ಇಲ್ಲಿದ್ದ ಸಮುದ್ರದಿಂದ ರೂಪುಗೊಂಡಿರುವುದಾಗಿಯೂ ಅದರ ಒಳಮೈಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಇರುವುದಾಗಿಯೂ ಅಲ್ಲಿನ ಗೈಡ್ ನಮಗೆ ಹೇಳಿದರು. ಅದರ ಎತ್ತರ ಆಕೃತಿ ನಮ್ಮ ಶಿರಸಿಯ ಯಾಣದಂತಿದೆಯಾದರೂ ಒಂದು ಲಾವಾದ ಪರಿಣಾಮದಿಂದ ಮತ್ತೊಂದು ಮರಳುಗಾಡಿನಲ್ಲಿ ಯಾವಾಗಲೋ ಬಿದ್ದ ಬೀಳುತ್ತಿದ್ದ ಮಳೆಯಿಂದ ಆಗಿರಬಹುದೆಂದು ನಂತರ ನಾನು ತಿಳಿದುಕೊಂಡೆ.

Read More

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ