Advertisement

Tag: ದಾದಾಪೀರ್ ಜೈಮನ್

ಹೀಗೊಂದು ‘ಭಿನ್ನ ಸಾಮಾನ್ಯ’ರ ಪ್ರೇಮಚರಿತೆ

‘ಜೀವನದಲ್ಲೊಂದು ಘಳಿಗೆ ಬಂದಿತು. ನಾನೊಬ್ಬ ಗೇ ಎನ್ನುವುದೇ ನನ್ನ ಟ್ರು ಐಡೆಂಟಿಟಿ ಎಂದು ಅನಿಸೋಕೆ ಶುರುವಾಯಿತು. ಆಗ ನಾನು ನನ್ನ ತಂದೆ ತಾಯಿಗೆ ಹೇಳಲೇಬೇಕಾಯಿತು. ಅಪ್ಪ ಮೊದಲಿಗೆ ನೀನು ಮನೆಗೆ ವಾಪಸ್ ಬರಬೇಕೆಂದರೆ ಅದೆಲ್ಲ ಬಿಡಬೇಕು ಎಂದರು. ಬಿಡುವುದಕ್ಕೆ ಅದೇನದು? ನನ್ನನ್ನ ನಾನಿರುವ ಹಾಗೆ ಒಪ್ಪಿಕೊಳ್ಳದಿದ್ದರೆ ನಾನು ಬರುವುದಿಲ್ಲ ಎಂದಿದ್ದೆ. ಕೂಡಲೇ ಫೋನ್ ಕಟ್ ಮಾಡಿದ್ದರು. ಆಮೇಲೇನಾಯಿತೋ ಏನೋ ಮತ್ತೆ ಅವರಿಂದ ಫೋನ್ ಬಂದಿತು… ನಾವಿಬ್ಬರು ಬೆಂಗಳೂರಿನಲ್ಲಿ ಜೊತೆಗಿರಲು ಶುರುಮಾಡಿದಾಗ ನಿನಗೊಬ್ಬಳು ಹೆಂಗಸು ಬೇಕೇ ಬೇಕು ಅಂದ್ರು.’

Read More

ಉಳಿದು ಬದುಕುವುದನ್ನೇ ಆಯ್ಕೆ ಮಾಡಿಕೊಂಡವನ ಕಥೆ

ಒಮ್ಮೊಮ್ಮೆ ಯೋಚಿಸಿದರೆ ನಮ್ಮ ಅಳತೆಗಳನ್ನು ಯೋಜನೆಗಳನ್ನು ಮೀರಿ ಜೀವನದಲ್ಲಿ ಏನೋ ಘಟಿಸುತ್ತಿರುತ್ತದೆ. ಒಮ್ಮೊಮ್ಮೆ ಅದಕ್ಕೊಂದು ಅರ್ಥವೇ ಇರುವುದಿಲ್ಲ. ತರಗೆಲೆಯಂತೆ ತೂರಿ ಎತ್ತೆತ್ತಲೋ ಹಾರಿ ಮತ್ತೆಲ್ಲೋ ಮತ್ಯಾವುದೋ ಮಣ್ಣಿನಲ್ಲಿ ಸೇರಿ ಕೊಳೆತು ಹೋಗಿಬಿಡುವ ಹಾಗೆ ಅನಿಸುತ್ತದೆ. ಬದುಕೇ ಹಾಗೆ! ಹುಡುಕುವಾಗ ನಾವು ಹುಡುಕುತ್ತಿರುವುದು ಸಿಗುವುದಿಲ್ಲ. ಹುಡುಕುವುದನ್ನು ನಿಲ್ಲಿಸಿದಾಗ ಧುತ್ತೆಂದು ತಂದು ಎಸೆಯುತ್ತದೆ. ಈ ಬದುಕಿಗೆ ಅರ್ಥ ಎನ್ನುವುದು ಇದೆಯೇ? ಈ ಬದುಕು ಅರ್ಥಗಳ ಹಂಗನ್ನು ಮೀರಿಕೊಳ್ಳಲು ಪ್ರಯತ್ನಿಸುತ್ತಿರುವ ಕವಿತೆಯೇ?

Read More

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ಧರ್ಮಗಳಲ್ಲಿ ಸಣ್ಣತನ ಮತ್ತು ಮನುಷ್ಯ ಧರ್ಮದೊಳಗಿನ ದೊಡ್ಡತನಗಳ ಸಣ್ಣ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ‘ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್ ಪಾಠವು, ‘ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಸ್ತ್ರೀಯ ಲೈಂಗಿಕ ಸ್ವಾತಂತ್ರ್ಯದ ಹಕ್ಕನ್ನು ಕೇಳುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ‘ಕೊನೆಯ ಮಳೆ’ ಯ ಹನಿಯೂ ಮನುಷ್ಯನ ಒದ್ದಾಟಗಳ ಯಥಾವತ್ತಾಗಿ ಅನುವಾದ ಮಾಡಿದ ಹಾಗಿವೆ.
ದಾದಾಪೀರ್‌ ಜೈಮನ್‌ ಅವರ “ನೀಲಕುರಿಂಜಿ” ಕಥಾಸಂಕಲನದ ಕುರಿತು ಚಾಂದ್ ಪಾಷ ಎನ್. ಎಸ್. ಬರಹ

Read More

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ದಾದಾಪೀರ್ ಜೈಮನ್ ಹೊಸ ಅಂಕಣ “ಜಂಕ್ಷನ್ ಪಾಯಿಂಟ್” ಇಂದು ಆರಂಭ

‘ನಾವು ಯಾವಾಗಲೂ ಹಾಗೆಯೇ ಅಲ್ಲವಾ? ನಮಗೆ ಗೊತ್ತಿರುವ ಯಾವುದೋ ಎಳೆ, ಬೇರೆಯವರ ಮಾತುಗಳಲ್ಲಿ ಬಂದಾಗ ಮಾತ್ರ ಅವರ ಮೇಲಿನ ವಿಶ್ವಾಸಾರ್ಹತೆ ಮತ್ತು ನಂಬಿಕೆ ಹೆಚ್ಚುತ್ತದೆ. ಅಲ್ಲೂ ಹೀಗೆ ಆಯಿತು’ ಎನ್ನುತ್ತ ಪೀಜಿ ಹಾಸ್ಟೆಲ್ ರೂಮ್ ನಲ್ಲಿ ನಡೆದ ಭೇಟಿಯೊಂದರ ಕುರಿತು ಬರೆದಿದ್ದಾರೆ ಹೊಸ ತಲೆಮಾರಿನ ಕಥೆಗಾರ ದಾದಾಪೀರ್ ಜೈಮನ್. ತಮ್ಮ ಶಿಕ್ಷಣ ಮತ್ತು ವೃತ್ತಿ ನಿರ್ವಹಣೆಯ ಸಂದರ್ಭದಲ್ಲಿ ಹೀಗೆ ಭೇಟಿಯಾದ ವ್ಯಕ್ತಿಗಳ ಕುರಿತು, ಸನ್ನಿವೇಶಗಳ ಕುರಿತು ಅವರು ತಮ್ಮ ಹೊಸ ಅಂಕಣ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ