Advertisement

Tag: ನಾಟಕ

ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ

ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೆರಡನೆಯ ಕಂತು

Read More

“ಕಳೆದು ಹೋದವರ ಹಾಡು” ಗಾಳಿಗಿಟ್ಟ ದೀಪಗಳ  ಪ್ರತಿಬಿಂಬ!: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಯಾದಗಿರಿ

‘ನಾನು ಕುಣಿಯುತ್ತೇನೆ, ಬಾಗುತ್ತೇನೆ, ನಡೆಯುತ್ತೇನೆ, ನಾನು ಶೃಂಗಾರ ಮಾಡಿಕೊಳ್ಳುತ್ತೇನೆ ಏನ್ ಈವಾಗ್’ ಎಂಬ ಧೋರಣೆ ಬಲವಾಗುವುದಕ್ಕೆ ತೊಡಗಿದಾಗ ಸಮಾಜವನ್ನು ಎದುರಿಸುವ ಶಕ್ತಿ ನಿರ್ಮಾಣವಾಗುತ್ತಾ ಸಾಗುತ್ತದೆ. ಇಲ್ಲಿ ತಾವೇ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು. ತಾವೇ ಸಂತೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಪಸಂಖ್ಯಾತರ ಬದುಕು ಕೆಂಡದ ಹಾದಿಯ ಮೇಲೆ ನಡೆದಂತೆ ಎಂಬ ನಿಲುವು ಪ್ರೇಕ್ಷಕರದಾಯಿತು.
ಮಂಗಳ ಎನ್. ನಿರ್ದೇಶನದ “ಕಳೆದು ಹೋದವರ ಹಾಡು” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ನೀನು ಬೆಳೆದರೆ ನಾನು ಬೆಳೆವೆನು: ಚಿತ್ರಾ ವೆಂಕಟರಾಜು ಸರಣಿ

ಎಷ್ಟು ಸಲ ಪ್ರವೇಶ ಕೊಡಬಾರದ ಸೀನ್‌ಗಳಲ್ಲಿ ತಪ್ಪಿ ಪ್ರವೇಶ ಕೊಟ್ಟಿರುತ್ತೇವೆ, ಆಡಲೇಬೇಕಾದ ಮಾತನ್ನು ಆಡದೇ ಉಳಿದಿದ್ದೇವೆ. ಆಡಬಾರದಿದ್ದ ಸಂಭಾಷಣೆಗಳನ್ನು ಸುಲಭವಾಗಿ ಆಡಿಬಿಟ್ಟಿರುತ್ತೇವೆ. ಏನೇ ಮಾಡಲಿ ಒಮ್ಮೆ ಆ ನಾಟಕ ಮುಗಿದ ಮೇಲೆ ಮುಗಿಯಿತು… ಒಮ್ಮೆ ಪ್ರದರ್ಶನ ಮುಗಿದ ಮೇಲೆ ಮತ್ತೆ ಆ ದೃಶ್ಯದಲ್ಲಿ ನಮ್ಮ ಎಂಟ್ರಿ ಇಲ್ಲ. ಮತ್ತೆ ಬೇರೆಯದೇ ನಾಟಕದಲ್ಲಿ ಬೇರೆಯದೇ ಪಾತ್ರ! ನಾಟಕದ ಮಜಾ ಎಂದರೆ ಬದುಕಿಗಿಲ್ಲದ ಮರು ಪ್ರದರ್ಶನದ ಅವಕಾಶ ನಾಟಕದಲ್ಲಿದೆ. ಎಲ್ಲ ನಟರೂ ಒಪ್ಪಿದರೆ ಮತ್ತೆ ಅದೇ ನಾಟಕವನ್ನು ಆಡಬಹುದು. ಬೇಕಿದ್ದರೆ ಬೇರೆ ರೀತಿಯಲ್ಲಿ. ಆದರೆ, ಪ್ರತಿ ಬಾರಿಯೂ ಹೊಸದಾಗಿ ಅಭಿನಯಿಸಬೇಕು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ

ಮೂರನೇ ಬೆಲ್‌ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಗಂಟಲಿನಿಂದ ಅದೆಷ್ಟೇ ಉಸಿರೆಳೆದರೂ, ನಾಲಗೆಯನ್ನು ಹೊರಳಿಸಿ ಉರುಳಿಸಿದರೂ ಊಹೂಂ, ಹಾಲು ಹಣ್ಣು ಬರಲೊಲ್ಲದು. ಅವರೂ ಹಿಡಿದ ಪಟ್ಟು ಬಿಡುವಂತೆ ಕಾಣಲಿಲ್ಲ. ಪಕ್ಕದಲ್ಲಿ ಪುಂಡಿ ಸೊಪ್ಪನ್ನು ಬಿಡಿಸಿಟ್ಟಿದ್ದರು. ಆ ಪುಂಡಿ ಕೋಲು ದಪ್ಪವಾಗಿರುತ್ತದೆ. ಮುಂದೇನು ಆಗಿರಬಹುದು ಹೇಳಿ? ಅನುಮಾನವೇ ಬೇಡ, ಬೆನ್ನಿಗೆ ಎರಡೇಟು ಬಾರಿಸಿದರು. ಚುರ್ ಎಂದು ಬಿದ್ದ ಏಟಿಗೆ ಕಣ್ಣಲ್ಲಿ ನೀರು ಜಿನುಗಿಸಿತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಏಳನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ