Advertisement

Tag: ನಾಟಕ

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ

ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್.‌ ರಮೇಶ್‌ ಬರಹ

Read More

ಜೊತೆಗಿರುವನು ಚಂದಿರ….: ಮೀನಾ ಮೈಸೂರು ಬರಹ

ಹೊಟ್ಟೆ ತುಂಬುವಷ್ಟು ಅನ್ನ ಸಿಕ್ಕರದೆ ಐಭೋಗವೆಂದು ನಂಬಿದ್ದ ತಾಯಿ, ತನ್ನ ಮಗಳಿಗೆ ತನ್ನ ಗಂಡನಿಗಿಂತಲೂ ವಯಸ್ಸಾದ ಆ ಗ್ರಾಮದಲ್ಲೇ ಸಿರಿವಂತನೆನಿಸಿದ್ದ ಕಲಾಯಿ ವೃತ್ತಿ ಮಾಡುವ ಮುದುಕನಿಗೆ ಮಗಳನ್ನು ಮದುವೆ ಮಾಡಲು ಒಪ್ಪಿಕೊಳ್ಳುವಂತಹ ದೈನೇಸಿ ಸ್ಥಿತಿ. ಆದರೆ ಆ ಮಗಳು ನೆರೆಮನೆಯ ಅದೇ ಜನಾಂಗದ ಹುಡುಗನನ್ನು ಪ್ರೀತಿಸುವುದು ತಂದೆಗೆ ಗೊತ್ತಾಗುತ್ತದೆ.
“ಜೊತೆಗಿರುವನು ಚಂದಿರ” ನಾಟಕದ ಕುರಿತು ಮೀನಾ ಮೈಸೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ