Advertisement

Tag: ನಾರಾಯಣ ಯಾಜಿ

ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ

ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್‌ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ವೈಜ್ಞಾನಿಕ ಕೌತುಕದ ಬೆರಗನ್ನು ಎಚ್ಚರಿಸುವ “ವಿಲಕ್ಷಣ ಜಲಜಾಲ”: ನಾರಾಯಣ ಯಾಜಿ

ನೀರೆನ್ನುವ ಅಪೂರ್ವ ವಸ್ತು ಈ ಪ್ರಕೃತಿಯಲ್ಲಿ ಸೃಷ್ಟಿಯ ಕಾಲದಿಂದಲೂ ಇದೆ. ಮುಂದೆಯೂ ಇರಲಿದೆ. ಆದರೆ ಅದರಗುಣಮಟ್ಟವನ್ನು ಕಾಪಾಡಿ ಬದುಕುವುದು ಮತ್ತು ಭುವಿಯ ಮೇಲಿನ ಜೀವ ಸಂಕುಲನವನ್ನು ಡೈನೋಸಾರಸ್‌ಗಳಂತೆ ನಾಶವಾಗಿ ಹೋಗದಂತೆ ಮಾಡುವಲ್ಲಿ ಮಾನವರ ಪಾತ್ರದ ಕುರಿತು ಅವರು ಈ ಕೃತಿಯ ಮೂಲಕ ಗಮನ ಸೆಳೆಯುತ್ತಾರೆ. ಕೃತಿಯೊಂದು ಜನರನ್ನು ತಲುಪಲು ಭಾಷೆ ಮತ್ತು ಶೈಲಿ ಬಲು ಮುಖ್ಯ. ಈ ಎರಡರಲ್ಲಿಯೂ ಸಾಗರ್ ಅವರದು ಎತ್ತಿದ ಕೈ.
ಡಾ. ಡಿ. ಎಂ. ಸಾಗರ್ ಬರೆದ “ವಿಲಕ್ಷಣ ಜಲಜಾಲ” ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

Read More

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್‌ ಕೇರ ಮುನ್ನುಡಿ

ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್‌ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ ಭೂಮಿ ತತ್ವವೂ ಹದವಾಗಿ ಬೆರೆತುಕೊಂಡಿವೆ. ಮಹಾತ್ಮ ಗಾಂಧಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಇರುವ ಲೇಖನಗಳು ಈ ಕೃತಿಯ ಪ್ರಮುಖ ಲೇಖನಗಳಲ್ಲಿ ಕೆಲವು. ಇವು ನಮ್ಮ ಐತಿಹಾಸಿಕ ನೆಲೆಗಟ್ಟಿನಲ್ಲಿ ಈ ಅದ್ವಿತೀಯ ಪುರುಷರ ಆದರ್ಶಗಳು ಕಾಣ್ಕೆಗಳು ಹೇಗಿದ್ದವು ಎಂಬುದರ ನಿಡುನೋಟವನ್ನು ನೀಡುತ್ತವೆ.
ನಾರಾಯಣ ಯಾಜಿ ಹೊಸ ಕೃತಿ “ಧವಳ ಧಾರಿಣಿ”ಗೆ ಹರೀಶ್‌ ಕೇರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ