Advertisement

Tag: ನಾರಾಯಣ ಯಾಜಿ

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಚತುರೋಕ್ತಿಯಿಂದ ಸಹೃದಯತೆಯ ಒಡಲನ್ನು ತೆರೆದಿಟ್ಟ ವ್ಯಕ್ತಿಚಿತ್ರಣ

ಎಮ್ ಎ ಹೆಗಡೆಯವರೆಂದೇ ಸಮಾಜದಲ್ಲಿ ಪ್ರಸಿದ್ಧರಾದ ಹೆಗಡೆಯವರಲ್ಲಿ ಮಹಾಬಲನೋರ್ವ ಇದ್ದಾನೆ ಎನ್ನುವದನ್ನು ಈ ಪುಸ್ತಕದಲ್ಲಿ ರಾಜಶೇಖರ ಹೆಗಡೆಯವರು ಗುರುತಿಸುತ್ತಾರೆ. ಜೀವನದಲ್ಲಿಯೂ ಹಾಗೇ ಅಪರಿಚಿತರಂತೇ ಕಾಣುತ್ತಾರೆ. ನಾಸ್ತಿಕರಂತೆ ತೋರುತ್ತಾರೆ. ಆದರೆ ಗರುಡ ಪುರಾಣವನ್ನು ವಾಚಿಸಿ ತಾಯಿಯ ಔರ್ಧದೈಹಿಕ ಕ್ರಿಯೆಗಳನ್ನು ನೆರವೇರಿಸುತ್ತಾರೆ. ಕುಟುಂಬ ಸಮೇತ ಕಾಶಿಯಾತ್ರೆಗೆ ಹೋಗುತ್ತಾರೆ. ಸಂಕೀರ್ಣವೆನಿಸಿಕೊಂಡ ವ್ಯಕ್ತಿತ್ವದೊಳಗೆ ತಮ್ಮವರೆನ್ನುವ ಭಾವನೆಯಿದೆ.
ರಾಜಶೇಖರ ಹೆಗಡೆ ಜೋಗಿನ್ಮನೆಯವರು ಬರೆದ “ಅಣ್ಣ ಮಹಾಬಲ – ಎಂ ಎ ಹೆಗಡೆಯವರ ಜೀವನ ಭಾವನ ಸಾಧನ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ