Advertisement

Tag: ಪುಸ್ತಕ

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಪೆಣ್ಣೆತ್ತ ಖುಷಿಯನು ಲೋಕಕೆ ಹಂಚಿ…: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವಂತೆ ಇಂತಹ ಎಷ್ಟು ಸಾಹಿತ್ಯ ರಚನೆಯಾದರೂ ಹೆಣ್ಣಿನ ಕುರಿತಾದ ಸಮಾಜದ ಮನಸ್ಥಿತಿ ಬದಲಾಯಿಸಲು ಆಗುತ್ತಿಲ್ಲ. ಎಷ್ಟೋ ಹೆಣ್ಣೆತ್ತ ತಂದೆ – ತಾಯಿಯರಿಗೆ ಹೆಣ್ಣನ್ನು ಹೆತ್ತಿದ್ದೇವೆ ಎನ್ನುವ ನೋವಿಗಿಂತಲೂ ಹೆಣ್ಣೆತ್ತವರನ್ನು ಸಮಾಧಾನ ಮಾಡುವ ಸೋಗಿನಲ್ಲಿ ಆಡುವ ಮಾತುಗಳ ನೋವೇ ಹೆಚ್ಚೆಂಬುದನ್ನು ದೇಸಾಯಿಯವರು ಬಹಳ ವಿಶೇಷವಾಗಿ ಹಾಸ್ಯ ಮಿಶ್ರಿತಗೊಳಿಸಿ ಹೇಳಿದ್ದಾರೆ.
ಗುಂಡುರಾವ್ ದೇಸಾಯಿ ಲಲಿತ ಪ್ರಬಂಧಗಳ ಕೃತಿ “ಪೆಣ್ಣೆತ್ತ ಖುಷಿಗೆ.. ಕುರಿತು ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಬರಹ

Read More

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ