Advertisement

Tag: ಪ್ರಬಂಧ

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಇಲ್ಲಿಯ ಭಾಷೆಯಲ್ಲಿ ಎಲ್ಲರಿಗೂ “ರೀ”…. ಎಂಬ ಅಕ್ಷರ ಹಚ್ಚಿಯೇ ಮಾತಾಡುವ ರೂಢಿಯಿದೆ. ಅಪ್ಪಾರು, ಅವ್ವಾರು, ಅಕ್ಕಾರು, ಮಾಮಾರು, ಅಣ್ಣಾರು, ಅಜ್ಜಾರು ಹೀಗೇ. ಎಲ್ಲರನ್ನೂ ಬಹುವಚನದಲ್ಲೇ ಹೆಸರಿಸುವ ಈ ಪದ್ಧತಿ ನಿಜಕ್ಕೂ ಒಳ್ಳೆಯದೇ. ಅದೇ ಕಾರಣಕ್ಕೆ ಆಂಗ್ಲ ಪದ ಬಳಕೆ ಮಾಡಿದಾಗಲೂ ಅವರು ಅದಕ್ಕೆ ಕನ್ನಡದ ‘ರೀ’ ಮತ್ತೂ ‘ರು’ ಪದ ಹಚ್ಚಿ, ” ಮೇಡಮ್ರಿ, ಸರ್ರೀ, ಮಮ್ಮೀರೀ…. ಡ್ಯಾಡಿರೀ, ಅಜ್ಜಾರ್ರೀ, ಅಂಕಲ್ರೀ ಅಂತ ರೂಪಾಂತರಿಸಿ, ಅದು ನಮ್ಮ ಕನ್ನಡದ್ದೇ ಅನ್ನುವಷ್ಟು ಸಲೀಸಾಗಿ ಬಳಸುವುದನ್ನು ನೋಡಿ, ನನಗೆ ಮೊದ ಮೊದಲು ತುಂಬಾ ವಿಸ್ಮಯವೆನ್ನಿಸುತ್ತಿತ್ತು.
ರೂಪಾ ರವೀಂದ್ರ ಜೋಷಿ ಬರೆದ ಪ್ರಬಂಧ

Read More

ಮುಯ್ಯಿಗೆ ಮುಯ್ಯಿ …!: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಇನ್ನೊಬ್ಬ ಸಹೋದ್ಯೋಗಿ ಬ್ರಹ್ಮಚಾರಿ ಸಾಧ್ಯವಾದಷ್ಟು ಕಾರ್ಯಕ್ರಮಗಳಿಗೆ ಕೈ ಕೊಡುತ್ತಿದ್ದ. ನಂತರ ತಡವಾಗಿ ಮದುವೆಯಾದ. ಒಂದು ಮಗುವಾಯಿತು. ಅಷ್ಟೇ ಸಾಕು ಎಂದು ನಿರ್ಧರಿಸಿದ. ಆನಂತರ ಅವನು ಯಾರದಾದರೂ ಮನೆಯಲ್ಲಿ ಇಬ್ಬರು ಮಕ್ಕಳಿದ್ದರೆ ಮೊದಲನೆಯ ಮದುವೆಗೆ ಹೋಗುತ್ತಿದ್ದ. ಉಡುಗೊರೆ ಕೊಡುತ್ತಿದ್ದ. ಎರಡನೆಯದಕ್ಕೆ ತಪ್ಪಿಸಿಕೊಳ್ಳುತ್ತಿದ್ದ.
ವಸಂತಕುಮಾರ್‌ ಕಲ್ಯಾಣಿ ಬರೆದ ಪ್ರಬಂಧ “ಮುಯ್ಯಿಗೆ ಮುಯ್ಯಿ…!”

Read More

ಹಾಳು ಮನೆಯ ಅತಿಥಿ !: ಶರಣಗೌಡ ಬಿ.ಪಾಟೀಲ ತಿಳಗೂಳ ಪ್ರಬಂಧ

“ಊರಾಗ ಜಾತ್ರೆ ಉತ್ಸವ ಮದುವೆ ಮುಂಜಿ ಏನಾದರು ಇದ್ದಾಗಾದ್ರು ಗಂಗಣ್ಣ ಬಂದು ಹೋಗಬಾರದಾ? ಎಂಥಹ ಮನುಷ್ಯ? ಆಗಾಗ ಬಂದು ಹೋದರೆ ಮನೆ ಕೂಡ ಸ್ವಚ್ಛವಾಗಿರ್ತಾದೆ, ಜನ ಕೂಡ ಗುರುತು ಹಿಡೀತಾರೆ, ಇಲ್ಲದಿದ್ದರೆ ಯಾರು ಗುರುತು ಹಿಡೀತಾರೆ?
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ