Advertisement

Tag: ಪ್ರವಾಸ

ಒಂಟಿಹೆಣ್ಣು ಮತ್ತು ಹಂಪೆಯಾತ್ರೆ: ಸುಕನ್ಯಾ ಕನಾರಳ್ಳಿ ಅಂಕಣ

ಮೂರನೆಯ ದಿನದ ಹೊತ್ತಿಗೆ ಮನಸ್ಸನ್ನು ಉಲ್ಲಾಸಕ್ಕೆ ಹಚ್ಚುವ, ಹರಿಯುವ, ಸೆಳೆಯುವ ನದಿಯನ್ನು ನೋಡಬೇಕೆನ್ನಿಸಿತ್ತು. ತುಂಗಭದ್ರೆಯ ಹರವನ್ನು ಕಲ್ಪಿಸಿಕೊಳ್ಳುತ್ತಾ ಬೆಳಿಗ್ಗೆಯೇ ಹೋಗಿ ಒಂದು ಮೂಲೆ ಹಿಡಿದು ಕೂತು ಎಷ್ಟೋ ಹೊತ್ತು ಆಕೆಯನ್ನು ಕಣ್ತುಂಬಿಕೊಂಡ ಮೇಲೆ ಸ್ವಲ್ಪ ಸಮಾಧಾನವೆನ್ನಿಸಿತ್ತು. ಕೃಷ್ಣದೇವರಾಯ ತನ್ನ ಆಳ್ವಿಕೆಯನ್ನು ಪ್ರಾರಂಭಿಸಿದ್ದ ಆನೆಗುಂದಿಗೆ ಹೋಗಬೇಕು ಎಂದು ಹೇಳಿದ್ದರೂ ನಮ್ಮ ಆಟೋವಾಲ ಕರೆದುಕೊಂಡು ಹೋಗಿದ್ದು ಐನೂರ ಎಪ್ಪತ್ತೈದು ಮೆಟ್ಟಿಲು ಹತ್ತಬೇಕಿದ್ದ ಅಂಜನಾದ್ರಿಗೆ. ಕಡಿದರೆ ಎರಡು ಆಳಾಗುವ ಒಬ್ಬ ಧಡಿಯ ಮೈಮೂತಿ ತುಂಬ ಹನುಮಂತನ ಬಣ್ಣ ಬಳಿದುಕೊಂಡು, ಸೊಂಟದ ಹಿಂದೆ ಒಂದು ಬಾಲವನ್ನು ಅಂಟಿಸಿಕೊಂಡು, ಗದೆ ಹಿಡಿದು ನಡುದಾರಿಯಲ್ಲಿ ಹಾದಿಗುಪ್ಪೆಯ ಮೇಲೇ ನಿಂತಿದ್ದ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಬೆಣ್ಣೆಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜಲಪಾತದ ಎಡಮಗ್ಗಲಿನ ತಗ್ಗಿನಲಿ ನಿಂತು ನೋಡಿದರೆ ನೀರಿನ ನಡುವೆ ಅಲ್ಲಲ್ಲಿ ಗುಲಾಲಿ ಬಣ್ಣದ ರೇಖೆಗಳು ಕಾಣಿಸಿ ನಿಮ್ಮನ್ನು ತಬ್ಬಿಬ್ಬು ಗೊಳಿಸುತ್ತದೆ. ಯಾವುದು ದಿಟ ಯಾವುದು ಮಿಥ್ಯ ಎಂದರಿಯುವ ಹೊತ್ತಿಗೆ ಜಲಪಾತ ನಿಮ್ಮ ಮನಸ್ಸನ್ನು ಮತ್ತು ಒಡಲನ್ನು ಒದ್ದೆ ಮಾಡಿಸಿರುತ್ತದೆ. ಮೌನದಲ್ಲೇ ನೀವು ಮೇಲೆ ಬಂದು ಜಲಪಾತದ ಎಡ ಭುಜಕ್ಕಾನಿಸಿ ಕುಳಿತು ಧ್ಯಾನಸ್ಥರಾಗುವಿರಿ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

Read More

ತುಂಬಾ ಕುಡಿದರೂ ತಲೆಗೇರದ `ತುಂಬಾ’: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

`ಮೇಘಾಲಯದ ವಾಕೆನ್ ಹಳ್ಳಿಯೊಂದರಲ್ಲಿ ನಡೆಯುವ ಬುಡಕಟ್ಟು ಉತ್ಸವದಲ್ಲಿ ಇದೇ ರೀತಿಯ ಪೇಯ ನೀಡುತ್ತಾರೆʼ ಎಂದು ಮೇಘಾಲಯದ ಗೆಳೆಯನೊಬ್ಬ ಅರುಹಿದ್ದ. ಇಲ್ಲಿನ ನಿರ್ಮಲ ಬುಡಕಟ್ಟು ಯಾವುದೇ ಪಂಗಡಕ್ಕೆ ಸೇರಿದವರಲ್ಲ. ದೇವರ ಹೆಸರು ಲಿಂಗ್‌ದಾ. ನೀವು ಕೇಳಿಲ್ಲ ಬಿಡಿ. ಭಕ್ತರು ತಮ್ಮ ಹೊಸ ಬೆಳೆಯನ್ನು ದೇವರಿಗೆ ಸಮರ್ಪಿಸುತ್ತಾರೆ. ಅಕ್ಕಿಯಿಂದ ತಯಾರಿಸಿದ ಬಿಯರೇ ಇಲ್ಲಿನ ದೇವರಿಗೆ ನೈವೇದ್ಯ. ಅದನ್ನೇ ಬಂದವರಿಗೆಲ್ಲಾ ತೀರ್ಥವಾಗಿ ಹಂಚುತ್ತಾರೆ! ಹಾಗಾಗಿ ಸರ್ವಾಂತರಯಾಮಿ ಈ ಪೇಯ! ಜಗದಗಲ ಹಬ್ಬಿದ ಈ ಸಂಪ್ರದಾಯಗಳ ತಾಯಿ ಬೇರೊಂದೆ ಅತಿಥಿ ಸತ್ಕಾರ ಮತ್ತು ಆರೋಗ್ಯ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಪ್ರಾಣಿ ಒಡನಾಟದಲ್ಲಿನ ಮನುಷ್ಯರ ಸಂಕಟ: ಡಾ. ವಿನತೆ ಶರ್ಮ ಬರೆಯುವ ಅಂಕಣ

ಕಾಡಿನ ರಸ್ತೆಯಲ್ಲಿ ಹೋಗುವಾಗ ವಾಹನ ನಿಲ್ಲಿಸಬೇಡಿ, ಪ್ರಾಣಿಗಳಿಗೆ ಆಹಾರ ಕೊಡಬಾರದು ಎಂದು ದಪ್ಪ ಅಕ್ಷರಗಳಲ್ಲಿ ಬರೆದಿದ್ದರೂ ಅಲ್ಲಲ್ಲಿ ಜನ ವಾಹನಗಳನ್ನು ನಿಲ್ಲಿಸಿದ್ದರು. ಪ್ರಾಣಿಗಳು ಕಾಣಿಸುತ್ತಿವೆ ಎಂದು ಖುಷಿ. ಹತ್ತಿರ ಬರುವ ಮಂಗಗಳಿಗೆ ಹಣ್ಣು, ಸ್ನ್ಯಾಕ್ಸ್ ಕೊಡುವುದು ಮಾಡುತ್ತಿದ್ದರು. ಸ್ವಲ್ಪ ದೂರದಲ್ಲಿ ಇದ್ದ, ಮಂಗಗಳನ್ನೇ ನೋಡುತ್ತಿದ್ದ ಜಿಂಕೆಗಳನ್ನು ಕರೆಯುವುದು ನಡೆದಿತ್ತು. ಇಷ್ಟಾದ ನಂತರ ಹೀಗೆಯೆ ಹಣ್ಣು ತೋರಿಸಿ ಕರೆದರೆ ಆನೆ, ಕಾಡೆಮ್ಮೆ ಕೂಡ ಬರಬಹುದು ಎನ್ನಿಸಿತು. ಅವುಗಳ ಸ್ವಾಭಾವಿಕ ಆಹಾರ ಪ್ರದೇಶಗಳನ್ನು ಈಗ ಲಂಟಾನಾ ಪೊದೆಗಳು ಆಕ್ರಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ