Advertisement

Tag: ಪ್ರವಾಸ

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

Read More

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ‌ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ‌ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಅಂಡಮಾನ್-ನಿಕೋಬಾರ್ ದ್ವೀಪಗಳ ಅನುಭವಗಳು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಪೋರ್ಟ್ ಬ್ಲೇರ್ ನಿಲ್ದಾಣದಲ್ಲಿ ಇಳಿದು ಹೊರಕ್ಕೆ ಬರುತ್ತಿದ್ದಂತೆ ಹಾರಾಡುತ್ತ ಬಂದ ಮೋಡಗಳು ಸಣ್ಣದಾಗಿ ಮಳೆ ಹನಿಯತೊಡಗಿದವು. ಇಬ್ಬರೂ ಓಡೋಡಿ ಹೋಗಿ ನಿಲ್ದಾಣದ ಒಳಕ್ಕೆ ಸೇರಿಕೊಂಡೆವು. ವಿಮಾನ ಮತ್ತು ವಿಮಾನ ನಿಲ್ದಾಣದ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಜನರು ಕೆಲವೇ ಕ್ಷಣಗಳಲ್ಲಿ ತೊಯ್ದು ತೊಪ್ಪೆಯಾಗಿದ್ದರು.
ಅಂಡಮಾನ್-ನಿಕೋಬಾರ್‌ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ