Advertisement

Tag: ಬರಹ

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ಕಳೆದುಕೊಂಡದ್ದಕ್ಕಿಂತ ಪಡೆದುಕೊಂಡದ್ದರ ತೂಕವೇ ಹೆಚ್ಚು…

ನನ್ನ ಉದ್ದ ಕೂದಲನ್ನು ಮೂರು ನಾಲ್ಕುದಿಕ್ಕಿನಲ್ಲಿ ಇಳಿಬಿಟ್ಟು ಒಂದೊಂದೇ ಭಾಗವನ್ನು ತಿಕ್ಕಿ ತಿಕ್ಕಿ ಚಂದ ಮಾಡಿ ಸ್ನಾನ ಮಾಡಿಸಿದ ಕೂದಲು ಒಣಗಿದ ಮೇಲೆ ಹಗುಹಗುರಾಗಿ ಇಮ್ಮಡಿಸುತ್ತಿತ್ತು, ಕೆಲವೊಮ್ಮೆ ಈ ಸ್ನಾನದ ನಂತರ ಊಟ ಮಾಡಿ ಪಪ್ಪನ ಕೈಮೇಲೆ ಕಥೆ ಕೇಳುತ್ತ ಮಲಗಿದರೆ ಏಳುತ್ತಿದ್ದುದು ಸಂಜೆ ಆರಕ್ಕೆ. ಅದೊಂದು ದಿನ ಮಧ್ಯಾಹ್ನ ಮಲಗಲು, ನಮಗೆ ಅವಕಾಶ ಇತ್ತಾದರೂ, ನಾವು ತಪ್ಪಿಸಿಕೊಳ್ಳುವ ಎಲ್ಲ ಉಪಾಯ ಮಾಡುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ