Advertisement

Tag: ಬಸವನಗೌಡ ಹೆಬ್ಬಳಗೆರೆ

ಪೋಸ್ಟರ್ ಬಳಿಯೋ ಕೆಲಸದಾಗಿನ ಕೆಲ ಅನುಭವಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ನಾವು ಪೋಸ್ಟರನ್ನು ಅಂಟಿಸುತ್ತಾ ಲಕ್ಷ್ಮೀ ಮೆಕ್ಕೆಜೋಳದ ಬೀಜಗಳ ಬಗ್ಗೆ ಪ್ರಚಾರ ಮಾಡುತ್ತಾ ಹೋಗುತ್ತಿದ್ದಾಗ ಒಂದು ಹಳ್ಳಿಯವರು ನಮ್ಮನ್ನು ಸುತ್ತುವರೆದು “ಕಳೆದ ವರ್ಷ ಇದೇ ಬೀಜಗಳನ್ನು ಬಿತ್ತಿದ್ದೆವು. ನಮಗೆ ಬೆಳೆ ಲಾಸ್ ಆಗಿದೆ. ಅವು ಸರಿಯಾಗಿ ಹುಟ್ಟಿಲ್ಲ. ಆದ್ದರಿಂದ ಆ ನಷ್ಟವನ್ನು ನೀವೇ ಭರಿಸಬೇಕು” ಎಂದು ನಮ್ಮನ್ನು ಕೇಳಲು ಶುರು ಮಾಡಿದರು. ಅದೇನೋ ಹೇಳ್ತಾರಲ್ಲಾ. ‘ಮದುವೆ ಆಗೋ ತಿಮ್ಮ ಅಂದ್ರೆ ನೀನೇ ನನ್ನ ಹೆಂಡ್ತಿ ಆಗೋ ಅಂದ್ನಂತೆ’ ಅನ್ನೋ ಹಾಗಾಯ್ತು ನಮ್ಮ ಪರಿಸ್ಥಿತಿ. ನಮ್ಮನ್ನು ಹಳ್ಳಿಯವರು ಹಾಗೇ ಕೇಳಿದಾಗ ನಾವು ನಮ್ಮ “ಮ್ಯಾನೇಜರ್‌ನ ಕರೆದುಕೊಂಡು ಬರ್ತೀವಿ” ಎಂದು ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆವು!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಓದು ಮುಗಿದ ನಂತರದ ಪ್ರಾರಂಭದ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಜಿಲ್ಲಾವಾರು ನೇಮಕವಿದ್ದ ಕಾರಣ ನನಗೆ 2 ಜಿಲ್ಲೆಗಳಿಗೆ ಅರ್ಜಿ ಹಾಕಲು ಹಣ ಇಲ್ಲದ ಕಾರಣ ಬರೀ ಒಂದೇ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಿದೆ, ಅದೂ ಮೈಸೂರಿನಲ್ಲಿ. ಕೆಲಸವನ್ನು ಗಿಟ್ಟಿಸಲೇ ಬೇಕೆಂಬ ಹಠವಿಡಿದು ಓದಿದೆ. ನಾನು ಮೈಸೂರಿನಲ್ಲಿಯೇ ಅರ್ಜಿ ಹಾಕಲು ಕಾರಣ ಅಲ್ಲಿ ನನ್ನ ಗೆಳೆಯನ ಅಣ್ಣನೊಬ್ಬನು ಓದುತ್ತಿದ್ದ. ಪರೀಕ್ಷೆ ಬರೆಯುವ ದಿನ ಅವನ ರೂಮಿನಲ್ಲಿ ಉಳಿಯಬಹುದು. ಬೇರೆ ಕಡೆ ಉಳಿದು ಖರ್ಚು ಮಾಡಲು ಹಣದ ತೊಂದರೆ ಇದ್ದುದರಿಂದ ನಾನು ಮೈಸೂರು ಒಂದಕ್ಕೇ ಅರ್ಜಿ ಹಾಕಲು ತೀರ್ಮಾನಿಸಿದ್ದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ದೇವರನ್ನು‌ ಕುರಿತು ಒಂದಿಷ್ಟು….: ಬಸವನಗೌಡ ಹೆಬ್ಬಳಗೆರೆ ಸರಣಿ

ಇತ್ತೀಚೆಗಂತೂ ದೇವರ ಆರಾಧನೆಯ ಜೊತೆ ಜೊತೆಗೆ ಪುರುಷ ಪ್ರಯತ್ನಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಕಲಿತಿದ್ದೇನೆ. ದೇವರು ಒಂಥರಾ ರಾಸಾಯನಿಕ ಕ್ರಿಯೆಯ ‘ಕ್ರಿಯಾವರ್ಧಕ’ (ಕ್ಯಾಟಲಿಸ್ಟ್) ಇದ್ದ ಹಾಗೆ ಎಂದು ನಂಬಿದ್ದೇನೆ. ವ್ಯಕ್ತಿ ತಾನು ಮಾಡುವ ಕಾರ್ಯಗಳಿಂದ ದೇವರ ಸ್ಥಾನಕ್ಕೆ ಏರಬಹುದು ಎಂದು ಹಲವು ಮಹಾನುಭಾವರ ಜೀವನದಿಂದ ತಿಳಿದುಕೊಂಡಿದ್ದೇನೆ. ಆದರೂ ಹಲವರು ದೇವರ ಹೆಸರಲ್ಲಿ ಜಗಳವಾಡುವುದನ್ನು ನೋಡಿ ವಿಚಿತ್ರ ಎನಿಸುತ್ತದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತನೆಯ ಕಂತು ನಿಮ್ಮ ಓದಿಗೆ

Read More

ಪುಸ್ತಕ ಹಾಗೂ ನೋಟ್ ಪುಸ್ತಕದ ಬಗ್ಗೆ ಒಂದಷ್ಟು ಮಾತು…: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಟಿಸಿಹೆಚ್ ಓದುವಾಗ ನಮ್ಮೂರಲ್ಲಿದ್ದ ಒಬ್ಬರು ನನಗೆ ಅವರ ಪುಸ್ತಕಗಳನ್ನು ಉಚಿತವಾಗಿ ಕೊಟ್ಟಿದ್ದರು. ಅಲ್ಲದೇ ನಮ್ಮೂರ ಗ್ರಂಥಪಾಲಕ ವಿಜಯಣ್ಣನೂ ಕೇಳಿದಾಗ ಪುಸ್ತಕಗಳನ್ನು ಕೊಡುತ್ತಿದ್ದರು. ನನ್ನ ಓದಿಗೆ ತುಂಬಾ ಸಹಕಾರ ಮಾಡಿದರು. ಪ್ರೌಢಶಾಲೆಯಲ್ಲಿದ್ದಾನ ನನಗೆ ನನ್ನ ಸೀನಿಯರ್ ಒಬ್ಬರು ಹಳೇ ಪುಸ್ತಕಗಳನ್ನು ಕೊಡುತ್ತೇನೆ ಎಂದು ಹೇಳಿ ಮೊದಲೇ ನನ್ನ ಬಳಿ ಅಡ್ವಾನ್ಸ್ ಆಗಿ ಹಣ ಪಡೆದು ಯಾಮಾರಿಸಿದ ಘಟನೆಯನ್ನು ನಾನು ಇನ್ನೂ ಮರೆತಿಲ್ಲ. ಅಲ್ಲದೇ ಪಿಯುಸಿಯನ್ನು ಬೆಂಗಳೂರಿನಲ್ಲಿ ಓದುವಾಗ ನಮ್ಮ ಹಾಸ್ಟೆಲ್ಲಿನ ಕೆಲ ಹುಡುಗರು ಪುಸ್ತಕಗಳನ್ನು ಕದ್ದು ಆಗ ಅವೆನ್ಯೂ ರಸ್ತೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ಪುಸ್ತಕದಂಗಡಿಗಳಿಗೆ ಮಾರುತ್ತಿದ್ದ ಘಟನೆಗಳೂ ಇವೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ