Advertisement

Tag: ಬಿ.ಕೆ. ಸುಮತಿ

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಭಾವಗೀತೆಗಳ ಭಾವಗುಚ್ಛ….

ರಾಜಕೀಯ ಭಾಷಣಗಳ ಮುನ್ನ ಜನರನ್ನು ಮೈದಾನಗಳಿಗೆ ಕರೆತರುತ್ತಿದ್ದುದೇ ಈ ಜೋರಾಗಿ ಕೇಳಿಸುತ್ತಿದ್ದ ಹಾಡುಗಳು. ಎಲ್ಲೆಲ್ಲೂ ಈ ಹಾಡುಗಳು ಮೊಳಗುತ್ತಿದ್ದವು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಎಲ್ಲಿಯಾದರೂ ಉತ್ಸವಗಳಲ್ಲಿ ಹಾಡಲು ಬಂದಾಗ ಈ ಗೀತೆಗಳನ್ನು ಹಾಡಲಿ ಎಂದು ಜನ ಅಪೇಕ್ಷೆ ಪಡುತ್ತಿದ್ದರು. ಸಿ. ಅಶ್ವಥ್ ಅವರ ಸಂಗೀತ ಮತ್ತು ವೈದ್ಯನಾಥನ್ ಅವರ ವಾದ್ಯಸಂಯೋಜನೆಯಲ್ಲಿ ಮೂಡಿ ಬಂದ ಭಾವಗೀತೆಗಳು ಇವು. ಒಂದು ರೀತಿ ಸಿನಿಮಾ ಗೀತೆಗಳು ಭಾಸವಾಗುತ್ತಿದ್ದವು.
ಕವಿ ದೊಡ್ಡರಂಗೇಗೌಡರ ಕವಿತೆಗಳನ್ನಿಟ್ಟುಕೊಂಡು ಸುಚೇಂದ್ರ ಪ್ರಸಾದ್‌ ನಿರ್ದೇಶಿಸಿರುವ ಸಿನಿಮಾ “ಮಾವು ಬೇವು” ಕುರಿತು ಬಿ.ಕೆ. ಸುಮತಿ ಬರಹ

Read More

ನಿಮ್ಮೂರ ದಾರಿಯಲಿ.. ನಮ್ಮನ್ನೇ ಹುಡುಕುತ್ತಾ..: ಬಿ.ಕೆ. ಸುಮತಿ ಲೇಖನ

“ಕೆಲವು ಮತ್ತೆ ಮತ್ತೆ ಕಾಡುವ ಊರುಗಳು. ನಾವು ನೋಡದಿದ್ದರೂ ನಮ್ಮೊಳಗೆ ಬೆಳೆದಿರುವಂಥದ್ದು. ಮತ್ತೆ ಕೆಲವು ಕಲ್ಪನೆಗಳು. ಈ ಕಲ್ಪನೆಗಳು ನಮ್ಮನ್ನು ಒಂದು ವಿಚಿತ್ರ ಭಾವದಲ್ಲಿ ಸಿಲುಕಿಸುತ್ತವೆ. ರಾಮಾಚಾರಿ ಮತ್ತು ಚಿತ್ರದುರ್ಗ…. ನೋಡಿ… ಅವಿನಾಭಾವ ಸಂಬಂಧ… ಚಿತ್ರದುರ್ಗ ನೋಡದೆ ಇದ್ದರೂ.. ನಾಗರಹಾವು ಮೂಲಕ ನಾವು ಬಂಡೆ, ಬಿಸಿಲು, ನೆರಳಿನ ತಪ್ಪಲನ್ನು ತಪಿಸಿ ಅನುಭವಿಸುತ್ತೇವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ