Advertisement

Tag: ಬೆಂಗಳೂರು

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಕೇರಳಿಗರ ಬೆಂಗಳೂರ ನಂಟು: ಎಚ್.ಗೋಪಾಲಕೃಷ್ಣ ಸರಣಿ

ಅಯ್ಯಪ್ಪ ದೇವರ ಮೂಲ ಕೇರಳ. ಅಂದ ಹಾಗೆ ನಾನು ಬೆಳೆದು ಓದಿ ನಂತರ ಕೆಲಸ ಮಾಡುತ್ತಿದ್ದ ಕಡೆ ಕೇರಳದವರ ಸಂಖ್ಯೆ ಹೆಚ್ಚು ಮತ್ತು ತುಂಬಾ ಚಟುವಟಿಕೆಯಿಂದಲೂ ಕೂಡಿದ್ದರು. ಕೇರಳದ ಸುಮಾರು ಹುಡುಗಿಯರು ಕನ್ನಡದ ಹುಡುಗರ ಕೈ ಹಿಡಿದಿದ್ದರು. ಸಮುದ್ರ ತೀರದ ಹುಡುಗಿಯರು ಅಂದರೆ ಆಕರ್ಷಕ ಮೈಕಟ್ಟು, ಗುಂಗುರು ಕೂದಲು ಮತ್ತು ಕೊಂಚ ಮುಂದೆ ಬಂದ ಹಲ್ಲುಗಳು. ಬಹುಶಃ ಆಡುವ ಭಾಷೆಯ ಪ್ರಭಾವ ಇರಬಹುದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ