Advertisement

Tag: ಬೆಂಗಳೂರು

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಕೇರಳಿಗರ ಬೆಂಗಳೂರ ನಂಟು: ಎಚ್.ಗೋಪಾಲಕೃಷ್ಣ ಸರಣಿ

ಅಯ್ಯಪ್ಪ ದೇವರ ಮೂಲ ಕೇರಳ. ಅಂದ ಹಾಗೆ ನಾನು ಬೆಳೆದು ಓದಿ ನಂತರ ಕೆಲಸ ಮಾಡುತ್ತಿದ್ದ ಕಡೆ ಕೇರಳದವರ ಸಂಖ್ಯೆ ಹೆಚ್ಚು ಮತ್ತು ತುಂಬಾ ಚಟುವಟಿಕೆಯಿಂದಲೂ ಕೂಡಿದ್ದರು. ಕೇರಳದ ಸುಮಾರು ಹುಡುಗಿಯರು ಕನ್ನಡದ ಹುಡುಗರ ಕೈ ಹಿಡಿದಿದ್ದರು. ಸಮುದ್ರ ತೀರದ ಹುಡುಗಿಯರು ಅಂದರೆ ಆಕರ್ಷಕ ಮೈಕಟ್ಟು, ಗುಂಗುರು ಕೂದಲು ಮತ್ತು ಕೊಂಚ ಮುಂದೆ ಬಂದ ಹಲ್ಲುಗಳು. ಬಹುಶಃ ಆಡುವ ಭಾಷೆಯ ಪ್ರಭಾವ ಇರಬಹುದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ