ಸುದ್ದಿಗಾರ ಕೆಂಪಣ್ಣ…

ಕೆಂಪಣ್ಣ ಭಜನೆಗೆ ನನ್ನನ್ನು ಕರೆದುಕೊಂಡು ಹೋಗುತ್ತಿದ್ದ. ಅವನ ಭಜನೆಯ ಬೈಠಕ್ ಒಂದು ರೀತಿ ಮತ್ತೇರಿಸುತ್ತಿತ್ತು. ಅವನು ಹಾಡಲು ಸುರುಮಾಡಿದರೆ ಹಿಮ್ಮೇಳದವರು ತಲಿ ಕೆರೆದುಕೊಳ್ಳುತ್ತಿದ್ದರು. ಏಕೆಂದರೆ ಅವನು ಹೇಳಿದ ಪದಗಳನ್ನು ಹಾಡುವುದು ಅಷ್ಟು ಸುಲಭವಾಗಿರಲಿಲ್ಲ. ಅವನ ಪದಗಳೋ ರೈಲು ಬಂಡಿಯಂತೆ ಉದ್ದವಾಗಿರುತ್ತಿದ್ದವು. ‘ಬೆಳ್ಳನೇ ಎರೆಡೆತ್ತು ಬೆಳ್ಳಿಯ ಬಾರುಕೋಲು ಕೇರಿಯ ದಂಡಿಯ ಹೊಲಕ್ಕೆ… ಕೆರೆಯ ದಂಡೆಯ ಹೊಲಕ್ಕೆ… ‘ ಎಂದು ಚೆಂದವಾಗಿ ಪದ ಹಾಡಹತ್ತಿದರೆ ಬಸವಣ್ಣನ ಗುಡಿಯೊಳಗಿನ ಕಲ್ಲಿನ ಬಸವನು ಕೂಡಾ “ಕೆಂಪಣ್ಣ ಹೊಲಕ್ಕೆ ನಾನು ಬರ್ತೀನಿ” ಅಂತಾ ಜೊತೆಯಾಗುತ್ತಿತ್ತು.

Read More