Advertisement

Tag: ಮುರಳಿ ಹತ್ವಾರ್

ಡೆಮೆನ್ಷಿಯಾದ ಮೂರು ಕತೆಗಳು: ಮುರಳಿ ಹತ್ವಾರ್‌ ಬರಹ

ತನ್ಮಾತ್ರ ಬಹುಶ ತನ್ನ ಕಾಲಕ್ಕೆ ಮೀರಿದ ಸಿನೆಮಾ. ಮಧ್ಯಮ ವರ್ಗದ ಕುಟುಂಬವೊಂದರ ಮುಖ್ಯಸ್ಥನಿಗೆ ಪ್ರಿ -ಸೆನೈಲ್ ಡಿಮೆನ್ಶಿಯಾ ಬಂದರೆ ಅದರಿಂದಾಗುವ ಆರ್ಥಿಕ, ಮಾನಸಿಕ, ಮತ್ತು ಸಾಮಾಜಿಕ ಹಿಂಸೆಗಳ ಪರಿಣಾಮಕಾರಿ ಚಿತ್ರಣ ಈ ಸಿನೆಮಾದಲ್ಲಿ ಮೂಡಿದೆ. ಪ್ರಿ-ಸೆನೈಲ್ ಡಿಮೆನ್ಷಿಯಾ ೬೫ ವರ್ಷಕ್ಕೆ ಮುನ್ನವೇ ಕಾಣಿಸಿಕೊಳ್ಳುವ ಡಿಮೆನ್ಷಿಯಾಗೆ ಕೊಟ್ಟ ಹೆಸರು.
“ಡೆಮೆನ್ಷಿಯಾ” ಎಂಬ ಕಾಯಿಲೆ ಸಾಮಾನ್ಯವಾಗುತ್ತಿರುವ ಈ ಸಮಯದಲ್ಲಿ ಅದರ ಕುರಿತಾದ ಚಲನಚಿತ್ರಗಳ ಕುರಿತು ಮುರಳಿ ಹತ್ವಾರ್‌ ಬರಹ ನಿಮ್ಮ ಓದಿಗೆ

Read More

ನೆನಪುಗಳ ಮೆರವಣಿಗೆಯಲ್ಲಿ ಗಣಪತಿ ಬಪ್ಪಾ..

ಹಬ್ಬದ ದಿನ, ಕತ್ತಲೇರುತ್ತಿದ್ದಂತೆ ಮನೆ ತುಂಬಾ ಜನ. ಎಷ್ಟೆಂದರೆ, ೧೩ ಮನೆ ದಾಯ್ ಆಟಕ್ಕೆ ಬೇಕಾಗುವಷ್ಟು ಕೈ, ಮತ್ತೆ ಅವರಿಗೆ ಬೇಕಾದಂತೆ, ಕಾಫಿ ಚಾ ಮಾಡಲಿಕ್ಕೆ, ಹೊರಗಡೆ ನಿಲ್ಲುತ್ತಿದ್ದ ಮಂಡಕ್ಕಿ ಗಾಡಿಯಿಂದ ಮಸಾಲೆ ಮಂಡಕ್ಕಿ ತಂದು ಕೊಡೋಕೆ, ಮತ್ತೆ, ದೊಡ್ಡ-ದೊಡ್ಡ ಗಣಪತಿಗಳ ಮೆರವಣಿಗೆ ಬಂದಾಗ ಅವರಿಗೆ ಹೇಳಲಿಕ್ಕೆ ಬೇಕಾದಷ್ಟು ಜನ. ದಾಯ್ ಆಟದ ಮಂದಿ ಪಳಗಿದ ಕೈಗಳಾದ್ದರಿಂದ, ನಮ್ಮಂತ ಮಕ್ಕಳು ಒಂದೋ ಆಟಕ್ಕುಂಟು ಲೆಕ್ಕಕಿಲ್ಲ ಅಥವಾ ಅರ್ಜೆಂಟಿಗೆ ಒಂದಿಷ್ಟು ನಿಮಿಷ ಬೇಕಾದಾಗ ಕವಡೆಯ ಕರಡಿಗೆ ಮಗಚುವ ಕೈ. ಉಳಿದ ಸಮಯದಲ್ಲಿ, ಮಂಡಕ್ಕಿ-ಸೋಡಾ ಮಜಾ ಮಾಡುತ್ತಾ, ಗಣಪತಿಗಳ ಟ್ರಾಕ್ಟರ್ ಜೊತೆಗೆ, ತಿನ್ನುತ್ತಿದ ಮಂಡಕ್ಕಿ ಪ್ಯಾಕೇಟಿನ ಲೆಕ್ಕ ಇಡುವದು ನಮ್ಮ ಕೆಲಸ. ಗಣೇಶ ಹಬ್ಬದ ನೆನಪುಗಳಿಗೆ ಅಕ್ಷರ ರೂಪ ನೀಡಿದ್ದಾರೆ ಮುರಳಿ ಹತ್ವಾರ್.‌ 

Read More

ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

“ಹೆಜ್ಜೆಗಳ ದಾರಿ ಎಳೆದ ಮೋಡಗಳೆಲ್ಲ
ಮಳೆಯಾಗಿ ಮರೆಯಾಗಿವೆ
ಸುಡುವ ಬಿಸಿಲಿನ ಸೂರ್ಯ
ಸರಿದಂತೆ ಹೊರಳುವ ನೆರಳಿನ ದಿಕ್ಕು,
ನಕ್ಷತ್ರಗಳ ಬೆಳಕು ಹೇಳುವ ದಾರಿ
ತಿಳಿಯುವುದು ಹೇಗೆ?”- ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ