Advertisement

Tag: ಯೋಗೀಂದ್ರ ಮರವಂತೆ

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ

ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್‌ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್‌ನಲ್ಲಿ ಮೆನನ್‌ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ

Read More

ಪದಗಳಿಗೆ ಸಿಗದ ಫಕೀರ

ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್‌ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಇಲ್ಲಿ ಉಳಿದರು ಹೀಗೆ ನಡೆದರು ಅಂಬೇಡ್ಕರ್

ಗಾಂಧೀಜಿ ಹಳ್ಳಿಗಳನ್ನು ಭಾರತದ ಬೆನ್ನೆಲುಬು, ನಾಗರಿಕತೆಯ ತೊಟ್ಟಿಲು ಎಂದು ವೈಭವೀಕರಿಸಿದರೆ ಅಂಬೇಡ್ಕರರಿಗೆ ಅವು ಜಾತ್ಯಾಧಾರಿತ ತಾರತಮ್ಯವನ್ನು ಸ್ಥಿರಗೊಳಿಸಿ ಆಳುವ ಕೂಪಗಳಾಗಿ ಕಾಣುತ್ತಿದ್ದವು. ಒಡಹುಟ್ಟಿದವರಿಗೆ ಸೇವೆಗಳು ನಿರ್ಬಂಧಿಸಲಾದ, ಕೆಲವು ಜಾತಿಗಳವರನ್ನು ಹೀನರೆಂದು ತಿಳಿಯುವ ಹಳ್ಳಿಯಲ್ಲಿ ಅವರು ವಾಸಿಸಿದವರು. ಪಟ್ಟಣಗಳು ಅವಕಾಶಗಳನ್ನು ಒದಗಿಸುವ, ಶಿಕ್ಷಣಕ್ಕೆ ಉತ್ತೇಜನ ನೀಡುವ ಜಾತಿಯನ್ನು ಆಧರಿಸದೇ ಉದ್ಯೋಗ ಬದುಕು ನೀಡುವ ತಾಣಗಳಾಗಿ ಕಂಡಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ