ಅಂಬಾಭವಾನಿಯ ಆರಾಧನೆಯ ದಿನಗಳು
ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ
