Advertisement

Tag: ರಂಜಾನ್ ದರ್ಗಾ

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

Read More

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ಎ ಪ್ಯಾಸೇಜ್ ಟು ನಾವಿಗಲ್ಲಿ…

ನಮ್ಮ ಕೆಲ ಜನ ಎಷ್ಟೊಂದು ವಿಚಿತ್ರವಾಗಿರುತ್ತಾರೆ ಎನ್ನುವುದಕ್ಕೆ ಗೌಸ್ ಮತ್ತು ಖೈರುನ್ನೀಸಾಳ ನಿಶ್ಚಿತಾರ್ಥವೇ ಸಾಕ್ಷಿ. ತನ್ನ ಮಗಳನ್ನು ತಮ್ಮನಿಗೆ ಕೊಡಬೇಕೆಂದು ಗೌಸ್ ಅಕ್ಕ ನಿರ್ಧರಿಸಿದಳು. ಆತನೋ ಗಂಡನಾಗುವ ಸಾಧ್ಯತೆ ಇಲ್ಲದವನು. ಆತನ ನಡಿಗೆ, ಮಾತು ಮುಂತಾದವು ಹೆಂಗಸರ ಹಾಗೇ ಇದ್ದವು. ಅವನ ಸಹವಾಸವೂ ಹೆಣ್ಣುಮಕ್ಕಳ ಜೊತೆಗೇ ಇತ್ತು. ಕಂಡ ಕಂಡವರ ಮನೆಯಲ್ಲಿ ಕಲಬತ್ತಿನಲ್ಲಿ ಚಟ್ನಿ ಕುಟ್ಟೋದು ಮತ್ತು ಮಸಾಲೆ ಅರಿದು ಕೊಡೋದು ಎಂದರೆ ಆತನಿಗೆ…

Read More

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ