Advertisement

Tag: ರಂಜಾನ್ ದರ್ಗಾ

ಛಡಿಯಾಮಿ ಛಂ ಛಂ, ವಿದ್ಯಾಯಾಮಿ ಘಂ ಘಂ

ಪ್ರತಿಯೊಬ್ಬ ವಿದ್ಯಾರ್ಥಿ ವೈವಿಧ್ಯಮಯವಾಗಿ ಬನಿಯನ್ ಬಾಕ್ಸ್‌ಗಳಲ್ಲಿ ಸರಸ್ವತಿಯ ಚಿತ್ರವಿಟ್ಟು ತನ್ನಿಚ್ಛೆಯಂತೆ ಸಿಂಗರಿಸಿ ಖುಷಿ ಪಡುತ್ತಿದ್ದ. ತುಂಬ ಶ್ರಮವಹಿಸಿ ತಯಾರಿಸಿದ ಈ ಸುಂದರ ‘ಸರಸ್ವತೀಮಂದಿರ’ಗಳನ್ನು ಬೇರೆ ವಿದ್ಯಾರ್ಥಿಗಳು ನೋಡುವುದು ಕಡಿಮೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಸಿಂಗರಿಸಿದ ಸರಸ್ವತಿಯನ್ನು ತಾನೇ ನೋಡುತ್ತ, ನೋಡುತ್ತ ಆನಂದತುಂದಿಲನಾಗಿ ತನ್ನ ಮತ್ತು ಸರಸ್ವತಿಯ ಮಧ್ಯೆ ಯಾರೂ ಇಲ್ಲದ ಹಾಗೆ ತದೇಕಚಿತ್ತನಾಗಿರುತ್ತಿದ್ದ. ಆ ಕ್ಷಣದ ಆನಂದವೇ ಆನಂದ. ಇದು ಒಂದುರೀತಿಯ ಲಿಂಗಾಂಗಸಾಮರಸ್ಯದಂತೆ!
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಹನ್ನೆರಡನೆಯ ಕಂತು

Read More

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

Read More

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ಅಲ್ಲೀಬಾದಿಯ ಋಣ ತೀರಿತು

ಹಳ್ಳಿಯ ಹೆಣ್ಣುಮಕ್ಕಳು ಗಂಡಸರಿಗಿಂತ ಹೆಚ್ಚಿಗೆ ದುಡಿಯುತ್ತಿದ್ದರು. ಅವರು ಹೊಲದ ಕೆಲಸದ ಜೊತೆ ಮನೆಯ ಕೆಲಸವನ್ನೂ ಮಾಡಬೇಕಾಗಿತ್ತು. ತುರಿಸಿಕೊಳ್ಳಲೂ ಸಮಯವಿಲ್ಲದ ಬದುಕು ಅವರದು. ರಾತ್ರಿಯಲ್ಲಿ ಅವರು ಬೇರೆ ಹೆಂಗಸರ ಜೊತೆಗೂಡಿ ಬಯಲುಕಡೆಗೆ ಹೊರಟಾಗ ಮಾತ್ರ ಊರ ಸುದ್ದಿ ಮಾಡನಾಡಲು ಅವಕಾಶ ಸಿಗುತ್ತಿತ್ತು! ಜೊತೆಗೂಡಿ ಗುಡಿಗೆ ಇಲ್ಲವೆ ದರ್ಗಾಕ್ಕೆ ಹೋಗುವುದು ಅವರ ಖಾಸಗಿತನಕ್ಕೆ ಪೂರಕವಾಗಿತ್ತು. ಮನೆಗೆ‘ಅರಿಷಿಣ ಕುಂಕುಮ’ ಕೊಡಲು ಹೋಗುವ ಸಂದರ್ಭದಲಿ ಅವರು ತಮ್ಮ ಓರಿಗೆಯ ಹೆಣ್ಣುಮಕ್ಕಳನ್ನು ಭೇಟಿಯಾಗುತ್ತಿದ್ದರು.
ರಂಜಾನ್ ದರ್ಗಾ ಬರೆಯುವ ಸರಣಿಯ ಎಂಟನೆಯ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ